ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: LET ಭಯೋತ್ಪಾದಕರಿಗೆ ನೆರವು ನೀಡಿದ ASI ವಿರುದ್ಧ ಇಲಾಖಾ ತನಿಖೆಗೆ ಆದೇಶ

ನಮ್ಮ ಸಿಬ್ಬಂದಿಗಳಲ್ಲಿ ಒಬ್ಬರು ಭಾಗಿಯಾಗಿರುವುದರಿಂದ, ನಾವು ವಿಚಾರಣೆ ನಡೆಸುತ್ತೇವೆ. ವಿಚಾರಣೆ ನಂತರ ಅವರನ್ನು ಅಮಾನತುಗೊಳಿಸಬಹುದು.

ಬೆಂಗಳೂರು: ಲ ಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕ ಟಿ ನಸೀರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿರುವ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಚಾನ್ ಪಾಷಾ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಸದ್ಯ ಇವರನ್ನು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿದೆ. ಆಡುಗೋಡಿಯ ಸಿಟಿ ಆರ್ಮ್ಡ್ ರಿಸರ್ವ್ ಪೆರೇಡ್ ಮೈದಾನ (ದಕ್ಷಿಣ)ದಲ್ಲಿ ಮಾಸಿಕ ಪರೇಡ್ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಇಲಾಖಾ ತನಿಖೆ ಆರಂಭಿಸಲಾಗಿದೆ ಎಂದು ದೃಢಪಡಿಸಿದರು.

ಈ ಪ್ರಕರಣದ ಕುರಿತು ಎನ್‌ಐಎ ತನ್ನ ವರದಿಯನ್ನು ಸಲ್ಲಿಸಲಿದೆ. ನಮ್ಮ ಸಿಬ್ಬಂದಿಗಳಲ್ಲಿ ಒಬ್ಬರು ಭಾಗಿಯಾಗಿರುವುದರಿಂದ, ನಾವು ವಿಚಾರಣೆ ನಡೆಸುತ್ತೇವೆ. ವಿಚಾರಣೆ ನಂತರ ಅವರನ್ನು ಅಮಾನತುಗೊಳಿಸಬಹುದು. ಪರಿಶೀಲನೆ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕ ಶೋಧದ ನಂತರ ಜುಲೈ 8 ರಂದು ಎನ್‌ಐಎ ಬಂಧಿಸಿದ ಮೂವರಲ್ಲಿ ಸಿಟಿ ಆರ್ಮ್ಡ್ ರಿಸರ್ವ್‌ಗೆ ಸೇರಿದ ಪಾಷಾ ಕೂಡ ಒಬ್ಬರಾಗಿದ್ದಾರೆ. ಬೆಂಗಳೂರು ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್ ಮತ್ತು ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ತಾಯಿ ಅನೀಸ್ ಫಾತಿಮಾ ಅವರನ್ನು ಬಂಧಿಸಲಾಗಿದೆ. ನಾಸೀರ್‌ಗೆ ಸಹಾಯ ಮಾಡಿದ ಮತ್ತು ಜೈಲು ಮತ್ತು ನ್ಯಾಯಾಲಯಕ್ಕೆ ಸಾಗಿಸುವಾಗ ಆತನ ಚಲನವಲನಗಳ ಬಗ್ಗೆ ಮಾಹಿತಿ ಸೋರಿಕೆ ಮಾಡಿದ ಆರೋಪ ಅವರ ಮೇಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT