ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ 
ರಾಜ್ಯ

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬಳಿ ಚಿರತೆ ಮೃತದೇಹ ಪತ್ತೆ; ವಿಷಪ್ರಾಶನ ಮಾಡಿರುವ ಶಂಕೆ

ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಆರಂಭಿಸಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಾಮರಾಜನಗರ: ಇಲ್ಲಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುವ ಕೊತ್ತಲವಾಡಿ ಗ್ರಾಮದ ಬಳಿಯ ಪ್ರದೇಶದ ಕಲ್ಲು ಕ್ವಾರಿಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸುಮಾರು ಐದರಿಂದ ಆರು ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದ್ದು, ವಿಷಪ್ರಾಶನ ಮಾಡಿ ಕೊಂದಿರಬಹುದು ಎಂದು ಅವರು ಶಂಕಿಸಿದ್ದಾರೆ.

ಅರಣ್ಯ ಇಲಾಖೆ ಪ್ರಕಾರ, ಗುರುವಾರ ಚಿರತೆಯ ಮೃತದೇಹದ ಬಳಿ ನಾಯಿ ಮತ್ತು ಕರುವಿನ ಮೃತದೇಹಗಳು ಪತ್ತೆಯಾಗಿವೆ.

ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಆರಂಭಿಸಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಸದ್ಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ನಾವು ಮಾದರಿಗಳನ್ನು ಸಂಗ್ರಹಿಸಿ ಮೈಸೂರಿನಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದೇವೆ. ವರದಿಗಳ ಆಧಾರದ ಮೇಲೆ, ನಾವು ಮುಂದಿನ ಕ್ರಮ ಕೈಗೊಳ್ಳುತ್ತೇವೆ' ಎಂದು ಅವರು ಹೇಳಿದರು.

ಜೂನ್ 26 ರಂದು ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ಅರಣ್ಯ ವಲಯದಲ್ಲಿ ಹೆಣ್ಣು ಹುಲಿ ಮತ್ತು ಅದರ ನಾಲ್ಕು ಮರಿಗಳು ಸಾವಿಗೀಡಾಗಿದ್ದ ಬೆನ್ನಲ್ಲೇ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 ಕಾಮನ್ವೆಲ್ತ್ ಕ್ರೀಡಾಕೂಟ ಅಹಮದಾಬಾದ್‌ನಲ್ಲಿ ಆಯೋಜಿಸಲು ಶಿಫಾರಸು; ನವೆಂಬರ್ 26 ರಂದು ಅಂತಿಮ ನಿರ್ಧಾರ

ಕೆಮ್ಮಿನ ಸಿರಪ್ ದುರಂತ: ಮಧ್ಯಪ್ರದೇಶದಲ್ಲಿ 3 ವರ್ಷದ ಬಾಲಕಿ ಸಾವು, ಮಕ್ಕಳ ಸಾವಿನ ಸಂಖ್ಯೆ 24ಕ್ಕೆ ಏರಿಕೆ!

ಗಡಿಯಲ್ಲಿ ಮತ್ತೆ ಉದ್ವಿಗ್ನತೆ: ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಪಾಕಿಸ್ತಾನ ಒಪ್ಪಿಗೆ!

ಬೆಂಗಳೂರಿಗರಿಗೆ ಗುಡ್​​ನ್ಯೂಸ್: ನವೆಂಬರ್ 1 ರಿಂದ A ಖಾತಾ ಅಭಿಯಾನ; ಆನ್‌ಲೈನ್ ವ್ಯವಸ್ಥೆಗೆ DCM ಚಾಲನೆ

"ಎಲ್ಲದಕ್ಕೂ ಒಂದು ಮಿತಿ ಇದೆ": ಕಿರಣ್ ಮಜುಂದಾರ್ ಷಾ ವಿರುದ್ಧ DCM ಡಿ.ಕೆ ಶಿವಕುಮಾರ್ ಕಿಡಿ

SCROLL FOR NEXT