ಸಿಎಂ ಸಿದ್ದರಾಮಯ್ಯ 
ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರದಿ ಸಲ್ಲಿಕೆ

ವರದಿ ಸ್ವೀಕರಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಯೋಗ ನೀಡಿದ ವರದಿಯನ್ನು ಜುಲೈ 17ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು.

ಬೆಂಗಳೂರು: ಆರ್‌ಸಿಬಿ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಘಟನೆಯ ತನಿಖೆಗೆ ರಚಿಸಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್‌ ಕುನ್ಹ ಆಯೋಗ ಎರಡು ಸಂಪುಟಗಳನ್ನು ಒಳಗೊಂಡ ವರದಿಯನ್ನು ಶುಕ್ರವಾರ ಮುಖ್ಯಮಂತ್ರಿಗೆ ಸಲ್ಲಿಸಿತು.

ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಯೋಜನೆ, ಸಮನ್ವಯ ಮತ್ತು ಜನಸಂದಣಿ ನಿರ್ವಹಣೆಯಲ್ಲಿನ ಲೋಪಗಳ ತನಿಖೆಗಾಗಿ ರಚಿಸಲಾದ ಆಯೋಗವು ಒಂದು ತಿಂಗಳ ಕಾಲ ನಡೆದ ತನಿಖೆಯ ನಂತರ ವರದಿಯನ್ನು ಸಲ್ಲಿಸಿತು.

ವರದಿ ಸ್ವೀಕರಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಯೋಗ ನೀಡಿದ ವರದಿಯನ್ನು ಜುಲೈ 17ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಚರ್ಚಿಸಿದ ನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ವರದಿಯನ್ನು ವಿವರವಾಗಿ ಓದಿಲ್ಲ. ನ್ಯಾಯಮೂರ್ತಿಗಳು ಮಾಡಿರುವ ಶಿಫಾರಸುಗಳ ಬಗ್ಗೆ ಚರ್ಚಿಸಿದ ನಂತರ ಸಂಪುಟವೇ ಅಂತಿಮ ನಿರ್ಧಾರ ಮಾಡಲಿದೆ ಎಂದರು. ಕ್ರೀಡಾಂಗಣದ ಕಾಲ್ತುಳಿತದ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ ಇನ್ನೂ ಮುಂದುವರೆದಿದೆ.

ಕಾಲ್ತುಳಿತದ ನಂತರ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣವನ್ನು ಈಗ ಕೇಂದ್ರ ತನಿಖಾ ಇಲಾಖೆಯ (ಸಿಐಡಿ) ಎಸ್‌ಐಟಿ ತನಿಖೆ ನಡೆಸುತ್ತಿದೆ. ನ್ಯಾಯಾಂಗ ಆಯೋಗದ ಜೊತೆಗೆ, ಮುಖ್ಯಮಂತ್ರಿಗಳು ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ್ದರು, ಆ ವರದಿಯನ್ನು ಇನ್ನೂ ಸಲ್ಲಿಸಲಾಗಿಲ್ಲ.

ಘಟನೆಯ ನಂತರ, ಪೊಲೀಸರು ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ನ ಮೂವರು ಕಾರ್ಯನಿರ್ವಾಹಕರನ್ನು ಬಂಧಿಸಿದರು, ಅವರೆಲ್ಲರೂ ಸದ್ಯ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ.

ಕರ್ತವ್ಯ ಲೋಪಕ್ಕಾಗಿ ಆಗಿನ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಸೇರಿದಂತೆ ಐದು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲು ಸಿಎಂ ಆದೇಶಿಸಿದ್ದರು. ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ 11 ಜನರು ಮೃತಪಟ್ಟ ದಾರುಣ ಘಟನೆ ನಡೆದ ಬೆನ್ನಲ್ಲೇ, ಮಾಜಿಸ್ಟ್ರೀಯಲ್ ವಿಚಾರಣೆಗೆ ಆದೇಶಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT