ಪತಿಯನ್ನೇ ನದಿಗೆ ತಳ್ಳಿದ ಪತ್ನಿ 
ರಾಜ್ಯ

Photoshoot ನೆಪದಲ್ಲಿ ಗಂಡನನ್ನೇ ನದಿಗೆ ತಳ್ಳಿದ ಪತ್ನಿ! Video Viral

ಇದನ್ನು ಕಂಡ ಸ್ಥಳೀಯರು ಕೂಡಲೇ ಹಗ್ಗಗಳ ಸಹಾಯದಿಂದ ಪತಿಯನ್ನು ರಕ್ಷಣೆ ಮಾಡಿದ್ದಾರೆ.

ರಾಯಚೂರು: ಫೋಟೋ ತೆಗೆಯುವ ನೆಪದಲ್ಲಿ ಪತ್ನಿ ತನ್ನ ಪತಿಯನ್ನೇ ನದಿಗೆ ತಳ್ಳಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದ್ದು, ಫೋಟೂ ಶೂಟ್ ನೆಪದಲ್ಲಿ ಪತ್ನಿಯೇ ತನ್ನ ಪತಿಯನ್ನು ನದಿಗೆ ತಳ್ಳಿದ್ದಾರೆ. ಇದನ್ನು ಕಂಡ ಸ್ಥಳೀಯರು ಕೂಡಲೇ ಹಗ್ಗಗಳ ಸಹಾಯದಿಂದ ಪತಿಯನ್ನು ರಕ್ಷಣೆ ಮಾಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ರಾಯಚೂರಿನ ಶಕ್ತಿನಗರ (Shakthinagara) ನಿವಾಸಿ ತಾತಪ್ಪ ನೀರಿಗೆ ಬಿದ್ದ ಪತಿಯಾಗಿದ್ದು, ಅವರ ಪತ್ನಿ ಗದ್ದೆಮ್ಮ ಅವರೇ ನೀರಿಗೆ ತಳ್ಳಿದ್ದಾರೆ. ನೀರಿಗೆ ಬಿದ್ದ ಕೂಡಲೇ ನದಿಯಲ್ಲಿ ಈಜಿ ಕಲ್ಲು ಬಂಡೆಯ ಮೇಲೆ ನಿಂತು ಕಾಪಾಡಿ ಅಂತ ಕೂಗಿಕೊಂಡಿದ್ದಾರೆ. ಈ ವೇಳೆ ಬ್ರಿಡ್ಜ್ ಕಂ ಬ್ಯಾರೇಜ್ ಮಾರ್ಗವಾಗಿ ಹೊರಟಿದ್ದ ಬುಲೆರೋ ವಾಹನದಲ್ಲಿದ್ದವರು ಹಾಗೂ ಕೆಬಿಜೆಎನ್‌ಎಲ್ ಸಿಬ್ಬಂದಿ, ಸ್ಥಳೀಯರು ನದಿಗೆ ಹಗ್ಗ ಎಸೆದು ತಾತಪ್ಪ ಅವರನ್ನು ರಕ್ಷಿಸಿದ್ದಾರೆ.

ನದಿಯಿಂದ ಹೊರಗೆ ಬಂದ ಪತಿ ತನ್ನ ಪತ್ನಿಯ ವಿರುದ್ಧ ಗರಂ ಆಗಿದ್ದು, ಫೋನ್‌ನಲ್ಲಿ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ.

ಇಷ್ಟಕ್ಕೂ ಆಗಿದ್ದೇನು?

ಯಾದಗಿರಿಯ (Yadagiri) ವಡಗೆರಾ ತಾಲೂಕಿನ ಗದ್ದೆಮ್ಮ ಹಾಗೂ ತಾತಪ್ಪ ಕಳೆದ ಏ.10ರಂದು ಮದುವೆಯಾಗಿದ್ದರು. ಮದುವೆಯಾಗಿ ಮೂರು ತಿಂಗಳಲ್ಲೇ ಸಂಸಾರದಲ್ಲಿ ಬಿರುಕು ಮೂಡಿ, ಜಗಳವಾಡುತ್ತಿದ್ದರು. ಆ ಜಗಳವೇ ಈ ಘಟನೆಗೆ ಕಾರಣ ಎಂದು ತಾತಪ್ಪ ಆರೋಪಿಸಿದ್ದಾರೆ.

ಪತ್ನಿಯನ್ನು ತುಂಬಾ ನಂಬಿದ್ದೆ

ಇನ್ನು ಘಟನೆ ಕುರಿತು ಮಾತನಾಡಿರುವ ಪತಿ ತಾತಪ್ಪ, 'ಪತ್ನಿಯನ್ನು ನಂಬಿ ಫೋಟೋ ತೆಗೆಸಿಕೊಳ್ಳಲು ನಿಂತಿದ್ದೆ. ಆದರೆ ಆಕೆ ನನ್ನನ್ನು ನದಿಗೆ ತಳ್ಳಿದ್ದಾಳೆ ಎಂದು ತಾತಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಪತ್ನಿ ಮಾತ್ರ ಈ ಆರೋಪ ಅಲ್ಲಗಳೆದಿದ್ದು, ನಾನು ಅವರನ್ನು ನದಿಗೆ ತಳ್ಳಿಲ್ಲ. ಅವರೇ ಕಾಲು ಜಾರಿ ನದಿಗೆ ಬಿದ್ದರು ಎಂದು ಹೇಳಿದ್ದಾರೆ.

ಘಟನೆ ಬಳಿಕ ಒಟ್ಟಾಗಿಯೇ ಬೈಕ್‌ನಲ್ಲಿ ಪತಿ-ಪತ್ನಿ ಹೊರಟು ಹೋಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!