ಹೊಸಪೇಟೆ(ವಿಜಯನಗರ): ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಇಂದು ಸಂಜೆ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮಗ ಸಾವನ್ನಪ್ಪಿದ್ದಾರೆ. ಮೃತರನ್ನು ದುಗ್ಗಾವತಿಯ 40 ವರ್ಷದ ರಮೇಶ್ ಹಾಗೂ ಪುತ್ರ 17 ವರ್ಷದ ಚಂದ್ರಪ್ಪ ಎಂದು ಗುರುತಿಸಲಾಗಿದೆ. ತೋಟವೊಂದರ ಬೇಲಿಗೆ ಅವೈಜ್ಞಾನಿಕವಾಗಿ ಸುತ್ತಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ ಸಂಭವಿಸಿದೆ.