ಸಾಂದರ್ಭಿಕ ಚಿತ್ರ 
ರಾಜ್ಯ

ಕೇವಲ 2 ಸಾವಿರ ರೂ ಲಂಚಕ್ಕಾಗಿ ಕೆಲಸ ಕಳೆದುಕೊಂಡ ಪಿಡಿಒ: ಭ್ರಷ್ಟ ಅಧಿಕಾರಿಗೆ ಕಡ್ಡಾಯ ನಿವೃತ್ತಿ ನೀಡಿದ ಸರ್ಕಾರ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್‌ನ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬುವವರಿಂದ ಮನೆ ಖರೀದಿಸಲು ‘ಇ-ಸ್ವತ್ತು’ ಮಂಜೂರಾತಿಗಾಗಿ ಬೇಡಿಕೆ ಇಟ್ಟಿದ್ದರು.

ಬೆಂಗಳೂರು: ‘ಇ-ಸ್ವತ್ತು’ಗಾಗಿ ಕೇವಲ 2,000 ರೂ. ಲಂಚ ಪಡೆದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ರಾಜ್ಯ ಸರ್ಕಾರ ಕಡ್ಡಾಯ ನಿವೃತ್ತಿ ನೀಡಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್‌ನ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬುವವರಿಂದ 14x100 ಅಡಿ ಅಳತೆಯ ಮನೆಯೊಂದಿಗೆ ಮನೆ ಖರೀದಿಸಲು ‘ಇ-ಸ್ವತ್ತು’ ಮಂಜೂರಾತಿಗಾಗಿ ಬೇಡಿಕೆ ಇಟ್ಟಿದ್ದರು. ಮಾವಿನಕಟ್ಟೆ ಗ್ರಾಮದ ನಿವಾಸಿ ರಂಗನಾಥ ಬಿ.ಎಚ್. ಅವರಿಂದ 2,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ರಾಜ್ಯ ಸರ್ಕಾರವು ಜುಲೈ 31, 2023 ರಂದು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ನಿಯಮ 14 (ಎ) ಅಡಿಯಲ್ಲಿ ಅವರ ವಿರುದ್ಧದ ತನಿಖೆಯನ್ನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ವಹಿಸಿತು. ಫೆಬ್ರವರಿ 18 ರಂದು ಉಪ ಲೋಕಾಯುಕ್ತರು, ಕರ್ನಾಟಕ ನಾಗರಿಕ ಸೇವಾ (ನಡವಳಿಕೆ) ನಿಯಮಗಳು, 1966 ರ ನಿಯಮ 3 (1) (i), (ii) ಮತ್ತು (iii) ಅಡಿಯಲ್ಲಿ ಅನುಚಿತವಾಗಿ ವರ್ತಿಸಿದ್ದರಿಂದ ಅವರಿಗೆ ಕಡ್ಡಾಯ ನಿವೃತ್ತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಶಿಫಾರಸನ್ನು ಅಂಗೀಕರಿಸಿದ ರಾಜ್ಯ ಸರ್ಕಾರವು ಮಾರ್ಚ್ 10 ರಂದು ಹನುಮಂತಪ್ಪ ಹಂಚಿನಮನೆ ಅವರಿಗೆ ಶೋಕಾಸ್ ನೋಟಿಸ್ ನೀಡಿತು. ಇದಕ್ಕೆ ಉತ್ತರವಾಗಿ, ಅವರು ಆರೋಪಗಳನ್ನು ನಿರಾಕರಿಸಿದರು, ತನಿಖಾಧಿಕಾರಿಯು ಅವರ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಹೇಳಿದರು. ವಿಚಾರಣಾ ವರದಿಯನ್ನು ಪರಿಶೀಲಿಸಿದ ರಾಜ್ಯ ಸರ್ಕಾರ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿತು. ಅದಾದ ನಂತರ ಪಿಓಡಿಗೆ ಕಡ್ಡಾಯ ನಿವೃತ್ತಿ ಘೋಷಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT