ಸಾಂದರ್ಭಿಕ ಚಿತ್ರ 
ರಾಜ್ಯ

ಕೇವಲ 2 ಸಾವಿರ ರೂ ಲಂಚಕ್ಕಾಗಿ ಕೆಲಸ ಕಳೆದುಕೊಂಡ ಪಿಡಿಒ: ಭ್ರಷ್ಟ ಅಧಿಕಾರಿಗೆ ಕಡ್ಡಾಯ ನಿವೃತ್ತಿ ನೀಡಿದ ಸರ್ಕಾರ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್‌ನ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬುವವರಿಂದ ಮನೆ ಖರೀದಿಸಲು ‘ಇ-ಸ್ವತ್ತು’ ಮಂಜೂರಾತಿಗಾಗಿ ಬೇಡಿಕೆ ಇಟ್ಟಿದ್ದರು.

ಬೆಂಗಳೂರು: ‘ಇ-ಸ್ವತ್ತು’ಗಾಗಿ ಕೇವಲ 2,000 ರೂ. ಲಂಚ ಪಡೆದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ರಾಜ್ಯ ಸರ್ಕಾರ ಕಡ್ಡಾಯ ನಿವೃತ್ತಿ ನೀಡಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್‌ನ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬುವವರಿಂದ 14x100 ಅಡಿ ಅಳತೆಯ ಮನೆಯೊಂದಿಗೆ ಮನೆ ಖರೀದಿಸಲು ‘ಇ-ಸ್ವತ್ತು’ ಮಂಜೂರಾತಿಗಾಗಿ ಬೇಡಿಕೆ ಇಟ್ಟಿದ್ದರು. ಮಾವಿನಕಟ್ಟೆ ಗ್ರಾಮದ ನಿವಾಸಿ ರಂಗನಾಥ ಬಿ.ಎಚ್. ಅವರಿಂದ 2,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ರಾಜ್ಯ ಸರ್ಕಾರವು ಜುಲೈ 31, 2023 ರಂದು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ನಿಯಮ 14 (ಎ) ಅಡಿಯಲ್ಲಿ ಅವರ ವಿರುದ್ಧದ ತನಿಖೆಯನ್ನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ವಹಿಸಿತು. ಫೆಬ್ರವರಿ 18 ರಂದು ಉಪ ಲೋಕಾಯುಕ್ತರು, ಕರ್ನಾಟಕ ನಾಗರಿಕ ಸೇವಾ (ನಡವಳಿಕೆ) ನಿಯಮಗಳು, 1966 ರ ನಿಯಮ 3 (1) (i), (ii) ಮತ್ತು (iii) ಅಡಿಯಲ್ಲಿ ಅನುಚಿತವಾಗಿ ವರ್ತಿಸಿದ್ದರಿಂದ ಅವರಿಗೆ ಕಡ್ಡಾಯ ನಿವೃತ್ತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಶಿಫಾರಸನ್ನು ಅಂಗೀಕರಿಸಿದ ರಾಜ್ಯ ಸರ್ಕಾರವು ಮಾರ್ಚ್ 10 ರಂದು ಹನುಮಂತಪ್ಪ ಹಂಚಿನಮನೆ ಅವರಿಗೆ ಶೋಕಾಸ್ ನೋಟಿಸ್ ನೀಡಿತು. ಇದಕ್ಕೆ ಉತ್ತರವಾಗಿ, ಅವರು ಆರೋಪಗಳನ್ನು ನಿರಾಕರಿಸಿದರು, ತನಿಖಾಧಿಕಾರಿಯು ಅವರ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಹೇಳಿದರು. ವಿಚಾರಣಾ ವರದಿಯನ್ನು ಪರಿಶೀಲಿಸಿದ ರಾಜ್ಯ ಸರ್ಕಾರ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿತು. ಅದಾದ ನಂತರ ಪಿಓಡಿಗೆ ಕಡ್ಡಾಯ ನಿವೃತ್ತಿ ಘೋಷಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿ ಬೇಡ: ಟ್ರಂಪ್ ಸೂಚನೆ ಬೆನ್ನಲ್ಲೇ ಹಿಂದೆ ಸರಿದ ಇಸ್ರೇಲ್, ಇರಾನ್ 'ನಾಶವಾಗಿದೆ' ಎಂದ ನೆತನ್ಯಾಹು

ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿಯಾದರೆ ಒತ್ತಡಕ್ಕೆ ಮಣಿಯದೆ ಅನಿಯಂತ್ರಿತ ದಾಳಿ: ಇರಾನ್ ಕಠಿಣ ಎಚ್ಚರಿಕೆ

West Asia war: ಇರಾನ್ ಗ್ಯಾಸ್ ಫೀಲ್ಡ್ ಮೇಲಿನ ದಾಳಿ ‘ಸೋಲೋ ಆಪರೇಷನ್’; ಅಮೆರಿಕಾ ಪಾತ್ರವಿಲ್ಲ- ಇಸ್ರೇಲ್ ಸ್ಪಷ್ಟನೆ

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಪಾಪಣ್ಣ ಮಟನ್‌ ಸ್ಟಾಲ್‌ ಮುಂದೆ ಜನರ ಕ್ಯೂ..!

ದೇವೇಗೌಡರು- ಕುಮಾರಸ್ವಾಮಿ ಅವರಿಗೆ ವಿಶಾಲ ಹೃದಯ ಇರಲಿಲ್ಲ: ಅವರನ್ನು ಪಿಎಂ- ಸಿಎಂ ಮಾಡಿದ್ದು ನಮ್ಮ ಪಕ್ಷ; ಡಿ.ಕೆ‌. ಶಿವಕುಮಾರ್

SCROLL FOR NEXT