ಶಾಸಕ ಸುರೇಶ್ ಕುಮಾರ್. 
ರಾಜ್ಯ

ರಿಯಲ್ ಎಸ್ಟೇಟ್ ಒತ್ತಡದಿಂದ ಹೆಬ್ಬಾಳ ಮೆಟ್ರೋ ಹಬ್ ರಕ್ಷಿಸಿ: ಸರ್ಕಾರಕ್ಕೆ ಸುರೇಶ್ ಕುಮಾರ್ ಒತ್ತಾಯ

ಬಹು ಮಾದರಿ ಸಾರಿಗೆ ಕೇಂದ್ರದ ವಿನ್ಯಾಸದಲ್ಲಿ ರಾಜಿ ಮಾಡಿಕೊಳ್ಳುವಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಸ್ಥಾಪಿತ ಹಿತಾಸಕ್ತಿಗಳು ಭಾರಿ ಒತ್ತಡ ಹೇರುತ್ತಿವೆ.

ಬೆಂಗಳೂರು: ಹೆಬ್ಬಾಳ ಬಳಿ ಬಹು ಮಾದರಿ ಸಾರಿಗೆ ಕೇಂದ್ರದ ವಿನ್ಯಾಸದಲ್ಲಿ ರಾಜಿ ಮಾಡಿಕೊಳ್ಳದೆ, 45 ಎಕರೆ ಜಮೀನನ್ನು ಬಿಎಂಆರ್‌ಸಿಎಲ್‌ಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುರೇಶ್ ಕುಮಾರ್ ಅವರು ಪತ್ರ ಬರೆದಿದ್ದು,ರಿಯಲ್ ಎಸ್ಟೇಟ್ ಒತ್ತಡದಿಂದ ಹೆಬ್ಬಾಳ ಮೆಟ್ರೋ ಹಬ್'ನ್ನು ರಕ್ಷಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಬಹು ಮಾದರಿ ಸಾರಿಗೆ ಕೇಂದ್ರದ ವಿನ್ಯಾಸದಲ್ಲಿ ರಾಜಿ ಮಾಡಿಕೊಳ್ಳುವಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಸ್ಥಾಪಿತ ಹಿತಾಸಕ್ತಿಗಳು ಭಾರಿ ಒತ್ತಡ ಹೇರುತ್ತಿವೆ. ಒತ್ತಡಕ್ಕೆ ಒಳಗಾದ ಬಿಎಂಆರ್‌ಸಿಎಲ್ ಈಗ ಯೋಜನೆಗೆ ತನ್ನ ಭೂಮಿಯ ಬೇಡಿಕೆಯನ್ನು 45 ಎಕರೆಗಳಿಂದ 9 ಎಕರೆಗಳಿಗೆ ಇಳಿಸಿದೆ.

ಇದನ್ನು ಸರಿಹೊಂದಿಸಲು ಡಿಪೋ, ಪಾರ್ಕಿಂಗ್ ಸ್ಥಳ ಮತ್ತು ವಿಮಾನ ನಿಲ್ದಾಣ ಮೆಟ್ರೊ ಮಾರ್ಗವನ್ನು ಸಂಪರ್ಕಿಸುವ ಟ್ರೈ-ಜಂಕ್ಷನ್ ಅನ್ನು ಒಳಗೊಂಡಿರುವ ಮೆಗಾ ಹಬ್ ಸೇರಿದಂತೆ ನಾಗರಿಕಸ್ನೇಹಿ ಸೌಲಭ್ಯಗಳನ್ನು ಕೈಬಿಟ್ಟಿದೆ. ರಾಜಕೀಯ ಮತ್ತು ರಿಯಲ್ ಎಸ್ಟೇಟ್ ಲಾಬಿಗಳಿಂದ ಅಸಹನೀಯ ಒತ್ತಡಕ್ಕೆ ಮಣಿದು, ರಾಜಿ ಮಾಡಿಕೊಳ್ಳುತ್ತಿದೆ,

2024ರ ಮಾರ್ಚ್‌ನಿಂದ 45 ಎಕರೆ ಭೂಮಿಗಾಗಿ ಬಿಎಂಆರ್‌ಸಿಎಲ್ ಮನವಿಯನ್ನು ಪರಿಶೀಲಿಸಲಾಗುತ್ತಿದೆ. ಈ ವಿಳಂಬವು ವಿಮಾನ ನಿಲ್ದಾಣ ಸಂಪರ್ಕಿಸುವ ಮೆಟ್ರೊದ ಯೋಜನೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸ್ವಾಧೀನದಲ್ಲಿರುವ 45 ಎಕರೆ ಭೂಮಿಗೆ ಸಂಬಂಧಿಸಿದಂತೆ, ಭೂಮಾಲೀಕರಿಗೆ ಪಾವತಿಸಲು ಕೆಐಎಡಿಬಿ ನಿಗದಿಪಡಿಸಿದ ಬೆಲೆಯನ್ನು ಪಾವತಿಸಲು ಬಿಎಂಆರ್‌ಸಿಎಲ್ ಸಿದ್ಧವಾಗಿದೆ. ಖಾಸಗಿ ಹಿತಾಸಕ್ತಿಗಿಂತ ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡಿ, ಈ ನಿರ್ಣಾಯಕ ಸ್ಥಳದಲ್ಲಿ ಮೆಟ್ರೊ ಯೋಜನೆಯ ಕೆಲಸವನ್ನು ವೇಗಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ನೇಮಕಾತಿ ವಯೋಮಿತಿ 5 ವರ್ಷ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು

ಐಷಾರಾಮಿ ರಿಯಲ್ ಎಸ್ಟೇಟ್ ಮೂಲಕ ಅಮೆರಿಕದಿಂದ 'ಹೊಸ ಗಾಜಾ' ಕಟ್ಟುವ ಭರವಸೆ!

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು!

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ 'ದಂಡುಪಾಳ್ಯ ಗ್ಯಾಂಗ್' ಸದಸ್ಯನ ಬಂಧನ!

ಟ್ರಂಪ್ ರ 'ಶಾಂತಿ ಮಂಡಳಿ' ಸೇರಲು ಭಾರತ ನಕಾರ; ಪಾಕಿಸ್ತಾನ ಸಹಿ!

SCROLL FOR NEXT