ಜೌಗು ಪ್ರದೇಶ ನಿರ್ಮಾಣ ಮಾಡಿರುವುದು. 
ರಾಜ್ಯ

ಜಕ್ಕೂರು ಕೆರೆಗೆ ಹರಿಯುವ ಕೊಳಚೆ ನೀರು ಸಂಸ್ಕರಣೆಗೆ BBMP ಮುಂದು: 10 ಎಕರೆ ವಿಸ್ತೀರ್ಣದ ಜೌಗು ಪ್ರದೇಶ ನಿರ್ಮಾಣ

ಜೌಗು ಪ್ರದೇಶ ಸೇರಿದಂತೆ 163 ಎಕರೆ ವಿಸ್ತೀರ್ಣದ ಕೆರೆಯು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಶದಲ್ಲಿತ್ತು. 2015 ರಲ್ಲಿ ಕೆರೆಯನ್ನು ಬಿಬಿಎಂಪಿಗೆ ವರ್ಗಾಯಿಸಲಾಯಿತು.

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಉಪಕ್ರಮದಡಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬ್ಯಾಟರಾಯನಪುರ ಜಕ್ಕೂರು ಕೆರೆ ಬಳಿ 10 ಎಕರೆ ವಿಸ್ತೀರ್ಣದ 'ಜೌಗು ಪ್ರದೇಶ'ವನ್ನು ಅಭಿವೃದ್ಧಿಪಡಿಸಿದ್ದು, ಈ ಮೂಲಕ ತ್ಯಾಜ್ಯ ನೀರು ಕೆರೆ ಸೇರುವುದಕ್ಕೂ ಮೊದಲು ಅದನ್ನು ಸಂಸ್ಕರಿಸವ ಕೆಲಸವನ್ನು ಮಾಡಲು ಮುಂದಾಗಿದೆ.

ಪ್ರಸ್ತುತ ಅಭಿವೃದ್ಧಿಪಡಿಸಿರುವ ಈ ಜೌಗು ಪ್ರದೇಶವು ಪ್ರತಿ ನಿತ್ಯ ಸುಮಾರು 7 ಮಿಲಿಯನ್ ಲೀಟರ್ ತ್ಯಾಜ್ಯ ನೀರನ್ನು ಸಂಸ್ಕರಿಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜೌಗು ಪ್ರದೇಶ ಸೇರಿದಂತೆ 163 ಎಕರೆ ವಿಸ್ತೀರ್ಣದ ಕೆರೆಯು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಶದಲ್ಲಿತ್ತು. 2015 ರಲ್ಲಿ ಕೆರೆಯನ್ನು ಬಿಬಿಎಂಪಿಗೆ ವರ್ಗಾಯಿಸಲಾಯಿತು. ಆದಾಗ್ಯೂ, 30 ಎಕರೆ ಕೆರೆ ಪ್ರದೇಶವನ್ನು ಅತಿಕ್ರಮಿಸಿ ತೆಂಗಿನ ಮರಗಳನ್ನು ನೆಡಲಾಗಿತ್ತು.. ನಂತರ ಈ 30 ಎಕರೆಗಳನ್ನು ಮರಳಿ ಪಡೆದು, ಬೇಲಿ ಹಾಕಲಾಯಿತು.

ಕೆರೆ ಬಳಿ ಯಾವುದೇ ಜೌಗು ಪ್ರದೇಶವಿಲ್ಲದ ಕಾರಣ, 10 ಎಕರೆ ಭೂಮಿಯಲ್ಲಿ ಕೃತಕ ಜೌಗು ಪ್ರದೇಶವನ್ನು ಅಭಿವೃದ್ಧಿಪಡಿಸಲಾಯಿತು. ಆರು ತಿಂಗಳ ಹಿಂದೆ ಕೆಸರು ತೆಗೆದು ಜೌಗು ಪ್ರದೇಶವನ್ನು ಆಳಗೊಳಿಸುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಜೌಗು ಪ್ರದೇಶವು ಘನವಸ್ತುಗಳನ್ನು ಹಿಡಿದಿಟ್ಟುಕೊಂಡು, ಪೊಟ್ಯಾಸಿಯಮ್ ಮತ್ತು ಸಾರಜನಕ ಮಟ್ಟವನ್ನು ಕಡಿಮೆ ಮಾಡುತ್ತದೆ. ಕೆರೆಯಲ್ಲಿ ಆಮ್ಲಜನಕ ಮಟ್ಟವನ್ನು ಹೆಚ್ಚಿಸುತ್ತದೆ. ಒಟ್ಟಾರೆ ಯೋಜನೆಗೆ 5 ಕೋಟಿ ರೂಪಾಯಿ ವೆಚ್ಚಾಗಿದೆ. ಕೆರೆಗೆ ನೀರು ಹರಿಯುವುದನ್ನು ಸುಧಾರಿಸಲು ಮುಂದಿನ ದಿನಗಳಲ್ಲಿ ಹೆಚ್ಚಿನ ಸಸ್ಯಗಳನ್ನು ಜೌಗು ಪ್ರದೇಶಕ್ಕೆ ಸೇರಿಸಲಾಗುವುದು ಎಂದು ಅಧಿಕಾರಿಯೊಬ್ಬರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT