ಸಾಂದರ್ಭಿಕ ಚಿತ್ರ 
ರಾಜ್ಯ

ಕ್ಷುಲ್ಲಕ ವಿಚಾರಕ್ಕೆ ಜಗಳ: ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಅಂಚೆಪಾಳ್ಯದ ನಿವಾಸಿ ತೇಜಸ್ ಹಲ್ಲೆಗೊಳಗಾದ ವ್ಯಕ್ತಿ. ಆಟೋ ಚಾಲಕನಾಗಿರುವ ತೇಜಸ್ ಕೆಲಸ ಮುಗಿಸಿ, ಶುಕ್ರವಾರ ರುದ್ರಪ್ಪ ಗಾರ್ಡನ್ ನಲ್ಲಿರುವ ಬಾರ್'ಗೆ ಸ್ನೇಹಿತ ಸಂತೋಷ್ ಜೊತೆ ಹೋಗಿದ್ದ.

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದ ದುಷ್ಕರ್ಮಿಗಳು ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ.

ಅಂಚೆಪಾಳ್ಯದ ನಿವಾಸಿ ತೇಜಸ್ ಹಲ್ಲೆಗೊಳಗಾದ ವ್ಯಕ್ತಿ. ಆಟೋ ಚಾಲಕನಾಗಿರುವ ತೇಜಸ್ ಕೆಲಸ ಮುಗಿಸಿ, ಶುಕ್ರವಾರ ರುದ್ರಪ್ಪ ಗಾರ್ಡನ್ ನಲ್ಲಿರುವ ಬಾರ್'ಗೆ ಸ್ನೇಹಿತ ಸಂತೋಷ್ ಜೊತೆ ಹೋಗಿದ್ದ. ಇಬ್ಬರೂ ಮದ್ಯಪಾನ ಮಾಡುತ್ತಿದ್ದಾಗ ರಾಹುಲ್, ಪ್ರಜ್ವಲ್, ಅಭಿಷೇಕ್ ಎಂಬುವವರು ಬಾರ್'ಗ ಬಂದಿದ್ದಾರೆ.

ಮೂವರು ಕ್ಷುಲ್ಲಕ ವಿಚಾರಕ್ಕೆ ಸಂತೋಷ್ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಈ ವೇಳೆ ತೇಜಸ್ ಸಂತೋಷ್ ಬೆಂಬಲಕ್ಕೆ ನಿಂದಿದ್ದಾರೆ. ಬಳಿಕ ಬಾರ್ ನಿಂದ ಹೊರಹೋದ ಮೂವರು ಆರೋಪಿಗಳು ಮಾರಕಾಸ್ತ್ರಗಳಿಂದ ವಾಪಸ್ಸಾಗಿದ್ದಾರೆ. ಈ ವೇಳೆ ಆಟೋ ಹತ್ತಲು ಸಿದ್ಧನಾಗಿದ್ದ ತೇಜಸ್ ನನ್ನು ಹೊರಗೆಳೆದು ಹಲ್ಲೆ ನಡಸಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತೇಜಸ್ ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ತೇಜಸ್ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆ ವೇಳೆ ಸಂತೋಷ್, ತೇಜಸ್ ಜೊತೆಗಿದ್ದನೋ, ಅಥವಾ ದಾಳಿಗೂ ಮುನ್ನ ಆತ ಹೊರಟು ಹೋಗಿದ್ದನೋ ಎಂಬುದು ಸ್ಪಷ್ಟವಾಗಿಲ್ಲ. ಆರೋಪಿಗಳ ಪತ್ತೆಗೆ ಹುಡುಕಾಟ ಆರಂಭಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಹಠಾತ್ ಪ್ರವಾಹಕ್ಕೆ ಮನೆ ಕುಸಿತ- ಐವರ ಸಾವು: 1,337 ರಸ್ತೆಗಳು ಬಂದ್, 3 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

SCROLL FOR NEXT