ವಿಶೇಷ ಡಿಜಿಲಾಕರ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ನರ್ಸ್ ಗಳ ನೋಂದಣಿಗಾಗಿ ವಿಶೇಷ ಡಿಜಿಲಾಕರ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಲಾದ ಈ ತಂತ್ರಜ್ಞಾನ ಆಧಾರ್ ಆಧಾರಿತ ಡಿಜಿಲಾಕರ್, ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೀಡಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗಾಗಿ ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಆಧಾರಿತ ತಂತ್ರಜ್ಞಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಉದ್ಘಾಟನೆ ಮಾಡಿದರು.

ವಿಶೇಷ ಡಿಜಿಲಾಕರ್ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಲಾದ ಈ ತಂತ್ರಜ್ಞಾನ ಆಧಾರ್ ಆಧಾರಿತ ಡಿಜಿಲಾಕರ್, ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೀಡಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಈ ವ್ಯವಸ್ಥೆಯನ್ನು ಯುಐಡಿಎಐ, ಸಿ-ಇಜಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ(ಆರ್‌ಜಿಯುಎಚ್‌ಎಸ್) ಮತ್ತು ಕರ್ನಾಟಕ ರಾಜ್ಯ ನರ್ಸಿಂಗ್ ಪರೀಕ್ಷಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ.

ಈ ತಂತ್ರಜ್ಞಾನದ ನೆರವಿನಿಂದ ಆಧಾರ್ ಇ-ಕೆವೈಸಿ (E-Kyc)ಯಿಂದ ಶುಶ್ರೂಷಕರ ವೈಯಕ್ತಿಕ ಡಾಟಾ, ವಿಳಾಸ, ಫೋಟೋ, ಹಾಗೂ ಇತರೆ ಮಾಹಿತಿಗಳನ್ನು ಆಧಾರ್ ಸರ್ವರ್ ನಿಂದ ನೇರವಾಗಿ ಕರ್ನಾಟಕ ಶುಶ್ರೂಷ ಪರಿಷತ್ ಪಡೆದುಕೊಳ್ಳಬಹುದಾಗಿದೆ. ಈ ಹಿಂದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ನೋಂದಣಿಗಾಗಿ ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್ತಿನ ಬೆಂಗಳೂರಿನ ಕೇಂದ್ರ ಕಚೇರಿಗೆ ಬರಬೇಕಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ; 11 ತಿಂಗಳಲ್ಲೇ ಗರಿಷ್ಠ ಮಟ್ಟ

ಶಕ್ತಿ ಯೋಜನೆಯಡಿ 'ಸ್ಮಾರ್ಟ್ ಕಾರ್ಡ್' ವಿತರಣೆಗೆ ಅಂತಿಮ ಸಿದ್ಧತೆ- ಸಚಿವ ಬೈರತಿ ಸುರೇಶ್

ಏನೇ ಶಾಂತಿ ಒಪ್ಪಂದವಾದ್ರೂ ನಾವು ಅಮೆರಿಕವನ್ನ ನಂಬಲ್ಲ: ಡೊನಾಲ್ಡ್ ಟ್ರಂಪ್ ಗೆ ಶಾಕ್ ಕೊಟ್ಟ Iran

ಮಜಾ ಭಾರತ-ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ಕಲಾವಿದ ನಟ ಸಿದ್ದಾರ್ಥ ಪರಸನೂರು ಅನುಮಾನಾಸ್ಪದ ಸಾವು!

'14 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಆಘಾತಕಾರಿ ಹೇಳಿಕೆ

SCROLL FOR NEXT