ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ಬಂಧನ!

ಈ ಆರೋಪಿಗಳು ನಗರ ಹೊರವಲಯದ ಇಟ್ಟಿಂಗಿಹಾಳ ರಸ್ತೆಯಲ್ಲಿ ಇರುವ ಮಾಹಿತಿ ಆಧರಿಸಿ ಪೊಲೀಸರು ಅಲ್ಲಿಗೆ ತೆರಳಿದ್ದಾರೆ.

ವಿಜಯಪುರ: ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ವಿಜಯಪುರದಲ್ಲಿ ಮಂಗಳವಾರ ನಡೆದಿದೆ.

ನಗರದ ಎಸ್.ಎಸ್ ರಸ್ತೆಯ ಅಮರ ವರ್ಷಿಣಿ ಸೌಹಾರ್ದ ಸಹಕಾರಿ ಬ್ಯಾಂಕಿನ ಆವರಣದಲ್ಲಿ ಸೋಮವಾರ ರೌಡಿ ಶೀಟರ್ ಸುಶೀಲ್ ಕುಮಾರ ಕಾಳೆ ಎಂಬಾತನ ಮೇಲೆ ನಾಲ್ಕೈದು ದುಷ್ಕರ್ಮಿಗಳು ಚಾಕು, ಮಚ್ಚಿನಿಂದ ಹೊಡೆದು ಪರಾರಿಯಾಗಿದ್ದರು.

ಈ ಆರೋಪಿಗಳು ನಗರ ಹೊರವಲಯದ ಇಟ್ಟಿಂಗಿಹಾಳ ರಸ್ತೆಯಲ್ಲಿ ಇರುವ ಮಾಹಿತಿ ಆಧರಿಸಿ ಪೊಲೀಸರು ಅಲ್ಲಿಗೆ ತೆರಳಿದ್ದಾರೆ.

ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ನಾಡ ಪಿಸ್ತೂಲ್ ನಿಂದ ಗುಂಡು ಹಾರಿಸಿ, ಬೈಕಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಪ್ರತಿಯಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು,ಈ ವೇಳೆ ಆರೋಪಿಗಳ ಕಾಲಿಗೆ ಗುಂಡು ತಗುಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಆರೋಪಿ ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ತಪ್ಪಿಸಿಕೊಂಡಿರುವ ಇನ್ನುಳಿದ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ