ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ಬಂಧನ!

ಈ ಆರೋಪಿಗಳು ನಗರ ಹೊರವಲಯದ ಇಟ್ಟಿಂಗಿಹಾಳ ರಸ್ತೆಯಲ್ಲಿ ಇರುವ ಮಾಹಿತಿ ಆಧರಿಸಿ ಪೊಲೀಸರು ಅಲ್ಲಿಗೆ ತೆರಳಿದ್ದಾರೆ.

ವಿಜಯಪುರ: ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ವಿಜಯಪುರದಲ್ಲಿ ಮಂಗಳವಾರ ನಡೆದಿದೆ.

ನಗರದ ಎಸ್.ಎಸ್ ರಸ್ತೆಯ ಅಮರ ವರ್ಷಿಣಿ ಸೌಹಾರ್ದ ಸಹಕಾರಿ ಬ್ಯಾಂಕಿನ ಆವರಣದಲ್ಲಿ ಸೋಮವಾರ ರೌಡಿ ಶೀಟರ್ ಸುಶೀಲ್ ಕುಮಾರ ಕಾಳೆ ಎಂಬಾತನ ಮೇಲೆ ನಾಲ್ಕೈದು ದುಷ್ಕರ್ಮಿಗಳು ಚಾಕು, ಮಚ್ಚಿನಿಂದ ಹೊಡೆದು ಪರಾರಿಯಾಗಿದ್ದರು.

ಈ ಆರೋಪಿಗಳು ನಗರ ಹೊರವಲಯದ ಇಟ್ಟಿಂಗಿಹಾಳ ರಸ್ತೆಯಲ್ಲಿ ಇರುವ ಮಾಹಿತಿ ಆಧರಿಸಿ ಪೊಲೀಸರು ಅಲ್ಲಿಗೆ ತೆರಳಿದ್ದಾರೆ.

ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ನಾಡ ಪಿಸ್ತೂಲ್ ನಿಂದ ಗುಂಡು ಹಾರಿಸಿ, ಬೈಕಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಪ್ರತಿಯಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು,ಈ ವೇಳೆ ಆರೋಪಿಗಳ ಕಾಲಿಗೆ ಗುಂಡು ತಗುಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಆರೋಪಿ ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ತಪ್ಪಿಸಿಕೊಂಡಿರುವ ಇನ್ನುಳಿದ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲಿಸಿ, ಎನ್‌ಐಎ ತನಿಖೆಗೆ ವಹಿಸಿ: ಆರ್‌. ಅಶೋಕ ಆಗ್ರಹ

ಮುಷ್ಕರದ ಬಿಸಿ, ಝೊಮ್ಯಾಟೊ, ಸ್ವಿಗ್ಗಿ ಸಿಬ್ಬಂದಿಗೆ ಹೆಚ್ಚಿನ ವೇತನ: ಹೊಸ ವರ್ಷದ ಮುನ್ನಾದಿನ ಗಿಗ್ ಕಾರ್ಮಿಕರಿಗೆ ಸಿಹಿಸುದ್ದಿ!

ಭಾರತದಿಂದ ಎರಡು 'ಪ್ರಳಯ್' ಕ್ಷಿಪಣಿ ಯಶಸ್ವಿ ಪರೀಕ್ಷೆ; ಶತ್ರು ಪಾಳಯದಲ್ಲಿ ನಡುಕ!

2026 ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಜಗತ್ತಿನ 2ನೇ ರಾಷ್ಟ್ರ ನ್ಯೂಜಿಲೆಂಡ್, ಮೊದಲು ಯಾವುದು?

ಢಾಕಾ: ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಜೈಶಂಕರ್ ಭಾಗಿ; ಕುಟುಂಬ ಭೇಟಿಯಾಗಿ ಸಾಂತ್ವನ

SCROLL FOR NEXT