ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಬಳ್ಳಾಪುರ: ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ, ಆತ್ಮಹತ್ಯೆಯ ಶಂಕೆ!

ಸುದ್ದಿ ತಿಳಿಯುತ್ತಿದ್ದಂತೆಯೇ ಪಾತಪಾಳ್ಯ ಪೊಲೀಸರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಕೆಯ ಸಾವಿನ ಕಾರಣ ನಿರ್ಧರಿಸಲು ಫೋರೆನ್ಸಿಕ್ ಮತ್ತು ಅಪರಾಧ ತಂಡಗಳು ತನಿಖೆಯಲ್ಲಿ ನೆರವಾಗುತ್ತಿವೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಅಡಿವಿಕೊತ್ತೂರು ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.

ಯುವತಿ ಸುಮಾರು 25 ವರ್ಷ ವಯಸ್ಸಿನವಳಾಗಿದ್ದು, ಮೂರ್ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಪಾತಪಾಳ್ಯ ಪೊಲೀಸರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಕೆಯ ಸಾವಿನ ಕಾರಣ ನಿರ್ಧರಿಸಲು ಫೋರೆನ್ಸಿಕ್ ಮತ್ತು ಅಪರಾಧ ತಂಡಗಳು ತನಿಖೆಯಲ್ಲಿ ನೆರವಾಗುತ್ತಿವೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ, ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡು ಬಂದಿದ್ದು, ಅದಕ್ಕೆ ಪೂರಕವಾದ ಸಾಕ್ಷ್ಯಗಳು ಸಿಕ್ಕಿವೆ. ಪ್ರಿಯಕರನೊಂದಿಗೆ ಜಗಳವಾಡಿ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಪ್ರಿಯಕರನನ್ನು ಗುರುತಿಸಿದ್ದು, ಸದ್ಯ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಪೊಲೀಸರಿಂದ ಪ್ರಿಯಾಂಕ ವಾಧ್ರ, ಕಾಂಗ್ರೆಸ್ ನಾಯಕರು ವಶಕ್ಕೆ; ಮಂದಿರ್ ಮಾರ್ಗ್ ಪೊಲೀಸ್ ಠಾಣೆಗೆ ಸೋನಿಯಾ ಗಾಂಧಿ ಭೇಟಿ

CJP Protest: ಸೋನಂ ವಾಂಗ್ಚುಕ್‌ಗೆ ಹೈಕೋರ್ಟ್ ಬಿಗ್ ರಿಲೀಫ್: ಸಫ್ದರ್‌ಜಂಗ್‌ನಿಂದ ಮೆದಾಂತ ಆಸ್ಪತ್ರೆಗೆ ಸ್ಥಳಾಂತರ

ಕೇರಳದಲ್ಲಿ ರಾಜಕೀಯ ಹೈಡ್ರಾಮಾ: ಅವಿಶ್ವಾಸ ನಿರ್ಣಯ, ಅಧಿಕಾರ ಕಳೆದುಕೊಂಡ ದೇಶದ ಕಿರಿಯ ಪೌರಸಭಾಧ್ಯಕ್ಷೆ!

New delhi: ಪ್ರಧಾನಿ ನಿವಾಸದ ಹೊರಗಡೆ ಪ್ರತಿಭಟನೆ; ರಾಹುಲ್, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ವಶಕ್ಕೆ ಪಡೆದ ಪೊಲೀಸರು! Video

ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ದೆಹಲಿ ಪೊಲೀಸರು ಹೇಳಿದ್ದೇನು?