ಸಾಂದರ್ಭಿಕ ಚಿತ್ರ 
ರಾಜ್ಯ

ಆಟೋ ಪ್ರಯಾಣ ದರ ಏರಿಕೆ ಅವೈಜ್ಞಾನಿಕ: ಹಿಂಪಡೆಯುವಂತೆ ಬೆಂಗಳೂರು ಆಟೋ ಯೂನಿಯನ್ ಆಗ್ರಹ

ಸೋಮವಾರ ಹೊರಡಿಸಲಾದ ದರ ಪರಿಷ್ಕರಣಾ ಆದೇಶವನ್ನು ಒಕ್ಕೂಟವು "ಅವೈಜ್ಞಾನಿಕ" ಎಂದು ಟೀಕಿಸಿದೆ. 2023 ರಿಂದ ದರ ಪರಿಷ್ಕರಣೆಗೆ ಒತ್ತಾಯಿಸಲಾಗುತ್ತಿದೆ ಎಂದು ARDU ಹೇಳಿದೆ.

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಪಾಲುದಾರರೊಂದಿಗೆ ಸಮಾಲೋಚನೆ ನಡೆಸದೆ ಆಟೋರಿಕ್ಷಾ ಮೀಟರ್ ದರಗಳನ್ನು ಪರಿಷ್ಕರಿಸುವ ಏಕಪಕ್ಷೀಯ ನಿರ್ಧಾರವನ್ನು ಆಟೋ ರಿಕ್ಷಾ ಚಾಲಕರ ಒಕ್ಕೂಟ (ARDU) ವಿರೋಧಿಸಿದೆ.

ಸೋಮವಾರ ಹೊರಡಿಸಲಾದ ದರ ಪರಿಷ್ಕರಣಾ ಆದೇಶವನ್ನು ಒಕ್ಕೂಟವು "ಅವೈಜ್ಞಾನಿಕ" ಎಂದು ಟೀಕಿಸಿದೆ. 2023 ರಿಂದ ದರ ಪರಿಷ್ಕರಣೆಗೆ ಒತ್ತಾಯಿಸಲಾಗುತ್ತಿದೆ ಎಂದು ARDU ಹೇಳಿದೆ. ಹಿಂದಿನ ಜಿಲ್ಲಾಧಿಕಾರಿಗಳು ಆಟೋರಿಕ್ಷಾ ಸಂಸ್ಥೆಗಳೊಂದಿಗೆ ಸಭೆಗಳನ್ನು ನಡೆಸಿದ್ದರು, ಆದರೆ ಈಗ ಯಾವುದೇ ಮಾತುಕತೆ ಚರ್ಚೆ ನಡೆಸದೆ ದರ ಏರಿಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕ ಮೋಟಾರು ವಾಹನ ನಿಯಮಗಳು 53 ಅನ್ನು ಉಲ್ಲೇಖಿಸಿರುವ ಒಕ್ಕೂಟ, "ಡಿಸಿಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಲ್ಲ, ಆದ್ದರಿಂದ ಅವರು ದರ ಏರಿಕೆ ಬಗ್ಗೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅದು ಒತ್ತಿ ಹೇಳಿದೆ. ಬೆಂಗಳೂರಿನೊಳಗೆ ಆಟೋ ಪರ್ಮಿಟ್‌ಗಳನ್ನು ನೀಡುವ ಅಥವಾ ರದ್ದುಗೊಳಿಸುವ ಅಧಿಕಾರ ಡಿಸಿಗಳಿಗೆ ಇಲ್ಲ ಎಂದು ತಿಳಿಸಿದೆ.

ವಾರ್ಷಿಕ ಪರಿಷ್ಕರಣೆಗೆ ಅವಕಾಶವಿಲ್ಲದೆ ಐದು ವರ್ಷಗಳವರೆಗೆ ದರವನ್ನು ನಿಗದಿಪಡಿಸುವುದನ್ನು ARDU ಸಹ ಆಕ್ಷೇಪಿಸಿದೆ. ಹೆಚ್ಚುತ್ತಿರುವ ಇಂಧನ ಮತ್ತು ನಿರ್ವಹಣಾ ವೆಚ್ಚಗಳನ್ನು ಪರಿಗಣಿಸದ ಈ ಕ್ರಮವು ವಾಸ್ತವತೆಯಿಂದ ದೂರವಿದೆ. ಈ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕೆಂದು ಒಕ್ಕೂಟವು ಒತ್ತಾಯಿಸಿದೆ ಮತ್ತು ಮೊದಲ 2 ಕಿ.ಮೀ.ಗೆ ಕನಿಷ್ಠ ದರವನ್ನು 40 ರೂ.ಗೆ ಹೆಚ್ಚಿಸುವಂತೆ ಸರ್ಕಾರವನ್ನು ಆಗ್ರಹಿಸಿದೆ.

ಅವರು ಮೀಟರ್ ದರವನ್ನು 40 ರೂ.ಗೆ ಹೆಚ್ಚಿಸಿದರೆ, ಆ್ಯಪ್‌ಗಳ ಮೂಲಕ ಸವಾರಿ ಮಾಡುವ ಆಟೋ ಚಾಲಕರು ಕಡಿಮೆಯಾಗುತ್ತಾರೆ ಮತ್ತು ಅವರು ಮೀಟರ್ ಚಾಲನೆಯೊಂದಿಗೆ ಸವಾರಿ ಮಾಡಲು ಪ್ರಾರಂಭಿಸುತ್ತಾರೆ ಮತ್ತು ಹೆಚ್ಚಿನ ದರವನ್ನು ಕೇಳುವುದನ್ನು ನಿಲ್ಲಿಸುತ್ತಾರೆ ಎಂಬ ವಿಶ್ವಾಸ ನಮಗಿದೆ" ಎಂದು ARDU ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ