ಸಾಂದರ್ಭಿಕ ಚಿತ್ರ  
ರಾಜ್ಯ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ: ಸಾರಿಗೆ ನಿಗಮಗಳ ನೌಕರರಿಂದ ಆಗಸ್ಟ್ 5ಕ್ಕೆ ಮುಷ್ಕರ

ರಾಜ್ಯದ ಕೆಎಸ್​ಆರ್​ಟಿಸಿ,, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.

ಬೆಂಗಳೂರು: ಸಾರಿಗೆ ನೌಕರರಿಗೆ 38 ತಿಂಗಳಿನಿಂದ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ರಾಜ್ಯದ ಕೆಎಸ್​ಆರ್​ಟಿಸಿ,, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯಗೆ ನೋಟಿಸ್

ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್​​ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಇ-ಮೇಲ್​ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ.

4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿ ಆಚರಣೆ: ಪ್ರಧಾನಿ ಮೋದಿ ‘ಮಹಾನ್ ವ್ಯಕ್ತಿ, ಉತ್ತಮ ಸ್ನೇಹಿತ’ ಎಂದು ಕೊಂಡಾಡಿದ ಡೊನಾಲ್ಡ್ ಟ್ರಂಪ್

Karnataka Weather-ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ವರ್ಷಧಾರೆ, ಅ.29ರವರೆಗೆ ಮಳೆ ಸೂಚನೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹಾಸನಾಂಬೆ ದರ್ಶನ ಇಂದು ಕೊನೆ: 8 ಕಿ.ಮೀ ವರೆಗೆ ಧರ್ಮ ದರ್ಶನ ಸಾಲು

ಮರಳು ಮಾಫಿಯಾ: ಸಿಎಂಗೆ ರಾಯರೆಡ್ಡಿ ಪತ್ರ ಬೆನ್ನಲ್ಲೇ ಕೌಂಟರ್ ಕೊಟ್ಟ ಅಧಿಕಾರಿಗಳು, ಪತ್ರ ಸಮರ ಆರಂಭ

ಅನುದಾನ ವಿಚಾರದಲ್ಲಿ ತಾರತಮ್ಯವಿಲ್ಲ, ಮೋದಿ "ದೀಪಾವಳಿ ಗಿಫ್ಟ್" ಜಾಹಿರಾತಿನಿಂದ ರಾಜ್ಯಕ್ಕೆ 15 ಸಾವಿರ ಕೋಟಿ ರೂ. ನಷ್ಟ; ಸಿಎಂ ಸಿದ್ದರಾಮಯ್ಯ

SCROLL FOR NEXT