ಸಿದ್ದರಾಮಯ್ಯ-ನಾರಾಯಣ ಭರಮನಿ 
ರಾಜ್ಯ

ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಬರಮನಿಗೆ ಜಾಕ್‌ಪಾಟ್; ಬೆಳಗಾವಿ DCP ಹುದ್ದೆಗೆ ಬಡ್ತಿ!

ಧಾರವಾಡ ಎಎಸ್‌ಪಿ ಆಗಿದ್ದ ಬರಮನಿ ಅವರಿಗೆ ಈಗ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್‌ ಆಯುಕ್ತ(ಡಿಸಿಪಿ) ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ತಮ್ಮ ಮೇಲೆ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ತೀವ್ರ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ಈಗ ಜಾಕ್‌ಪಾಟ್ ಹೊಡೆದಿದೆ.

ಧಾರವಾಡ ಎಎಸ್‌ಪಿ ಆಗಿದ್ದ ಬರಮನಿ ಅವರಿಗೆ ಈಗ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್‌ ಆಯುಕ್ತ(ಡಿಸಿಪಿ) ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.

ಕೆಲವು ತಿಂಗಳುಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿದ್ದರಾಮಯ್ಯನವರಿಂದ ಮುಜುಗರಕ್ಕೀಡಾಗಿದ್ದರು. ಕಾರ್ಯಕ್ರಮದ ಮಧ್ಯೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಕ್ಕೆ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ ಅವರು ಯಾರು ಎಸ್‌ಪಿ ಎಂದು ಕೇಳಿ, ಕೈಎತ್ತಿ ಹೊಡೆಯಲು ಹೋಗಿದ್ದರು.

ಈ ಘಟನೆ ಬಳಿಕ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ನಾರಾಯಣ ಬರಮನಿ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಮಾತನಾಡಿ ಮನವೊಲಿಸಿದ್ದರು. ನಂತರ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT