ಭಾರಿ ಮಳೆ (ಸಂಗ್ರಹ ಚಿತ್ರ) 
ರಾಜ್ಯ

Karnataka Rains: ಕೊಡಗು, ಉತ್ತರ ಕನ್ನಡದಲ್ಲಿ ನಿರಂತರ ಮಳೆ; ಶಾಲೆಗಳಿಗೆ ರಜೆ ಘೋಷಣೆ; ಜುಲೈ 22ರವರೆಗೂ ವರ್ಷಧಾರೆ ಸಾಧ್ಯತೆ

ಕರ್ನಾಟಕದ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ.

ಕಾರವಾರ: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಮುಂವರೆದ ಪರಿಣಾಮ ಕೊಡಗು, ಉತ್ತರ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷೀಪ್ರಿಯಾ ರಜೆ ಘೋಷಣೆ ಮಾಡಿದ್ದಾರೆ.

ವ್ಯಾಪಕ ಮಳೆ

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ಗಾಳಿ ಸಹಿತ ಅಧಿಕ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡದಲ್ಲೂ ಮಳೆ ಅಬ್ಬರಿಸಿದ್ದು ನದಿ ನೀರಿನ ಮಟ್ಟ ಏರಿಕೆಯಾಗಿದೆ. ಮಡಿಕೇರಿಯಲ್ಲಿ ನಿರಂತರ ಗಾಳಿಮಳೆಯಾಗುತ್ತಿದ್ದು, ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣದಿಂದ ಜನ ಹಾಗೂ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ಜಿಲ್ಲಾಧಿಕಾರಿ ವೆಂಕಟರಾಜ ಅವರು ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಜುಲೈ 22ರವರೆಗೂ ಮಳೆ ಸಾಧ್ಯತೆ

ಇನ್ನು ಗುರುವಾರ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಳದಿ ಎಚ್ಚರಿಕೆ ನೀಡಿದೆ. ಇದಲ್ಲದೆ, ಕರ್ನಾಟಕದ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ.

ಅಂತೆಯೇ ಜುಲೈ 22 ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ; ಪುತ್ತೂರಿನಲ್ಲಿ ಆಗಿದ್ದೇನು?

ಬಿಜೆಪಿಯಿಂದಲೇ ಹಣ ಕಲೆಕ್ಷನ್: ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಆರೋಪಕ್ಕೆ ಸಿಎಂ ತಿರುಗೇಟು

KL Rahulರನ್ನು ಹೀಗೆ ನಡೆಸಿಕೊಂಡಿದ್ದು ನಿಜಕ್ಕೂ ಹಾಸ್ಯಾಸ್ಪದ: ಮೂರ್ಖತನದ ನಿರ್ಧಾರ ಎಂದು ಟೀಕಿಸಿದ ಮಾಜಿ ನಾಯಕ

ಕಾಂಗ್ರೆಸ್-ಆರ್‌ಜೆಡಿಯಿಂದ 'ಪಿತೂರಿ'; ಬಿಹಾರ ಚುನಾವಣೆಯಿಂದ ಹಿಂದೆ ಸರಿದ ಜೆಎಂಎಂ

News headlines 20-10-2025| ದಕ್ಷಿಣ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆ, ಸುಳ್ಳು ಸುದ್ದಿ ಹರಡಿದರೆ ಕೇಸ್- ಸಿದ್ದರಾಮಯ್ಯ; ವೇತನ ನೀಡದೇ ಕಿರುಕುಳ: ಇಂಜಿನಿಯರ್ ಆತ್ಮಹತ್ಯೆ; ಅತಿವೃಷ್ಟಿ: ರಾಜ್ಯಕ್ಕೆ 300 ಕೋಟಿ, ಮಹಾರಾಷ್ಟ್ರಕ್ಕೆ 1,500 ಕೋಟಿ ರೂ ಕೇಂದ್ರ ಪರಿಹಾರ

SCROLL FOR NEXT