ರಾಜ್ಯ

ಮಂಗಳೂರು: ಕಾಡಿನೊಳಗೆ ಪಂಚಾಯ್ತಿ ಅಧ್ಯಕ್ಷೆ ಪತಿ ಜತೆ ಸರಸ ಸಲ್ಲಾಪ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ, ರಕ್ತ ಹರಿಸಿದ ರಫೀಕ್!

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಹೋಗಿದ್ದ ಪತಿ ಕಾಡಿನೊಳಗೆ ಪರಪುರುಷನ ಜೊತೆ ಸರಸ ಸಲ್ಲಾಪದಲ್ಲಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ.

ಮಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಹೋಗಿದ್ದ ಪತಿ ಕಾಡಿನೊಳಗೆ ಪರಪುರುಷನ ಜೊತೆ ಸರಸ ಸಲ್ಲಾಪದಲ್ಲಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಝೀನತ್ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ‌ ತೆಕ್ಕಾರು ಗ್ರಾಮದ ಬಾಜಾರು ನಿವಾಸಿ ರಫೀಕ್ 18 ವರ್ಷಗಳ ಹಿಂದೆ ಝೀನತ್ ಳನ್ನು ಮದುವೆಯಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ರಫೀಕ್ ಪತ್ನಿಯ ಅಕ್ರಮ ಸಂಬಂಧ ವಿಷಯ ತಿಳಿದು ಕೆಲಸ ಬಿಟ್ಟು ಗ್ರಾಮಕ್ಕೆ ವಾಪಸ್ಸಾಗಿದ್ದನು. ವಿದೇಶದಲ್ಲಿ ದುಡಿದ್ದಿದ್ದ ಹಣದಲ್ಲಿ ರಫೀಕ್ ಮನೆಯೊಂದನ್ನು ಕಟ್ಟಿಸಿದ್ದು ಅದು ಅರ್ಧಕ್ಕೆ ನಿಂತಿದ್ದು ಅದೇ ಮನೆಯಲ್ಲಿ ಪತ್ನಿ ಜೊತೆ ವಾಸವಾಗಿದ್ದನು. ಇನ್ನು ಪತಿ ವಿದೇಶದಲ್ಲಿದ್ದಾಗಲೇ ಝೀನತ್ ಕಳೆದ ಎರಡು ವರ್ಷಗಳಿಂದ ಅದೇ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷೆಯ ಪತಿ ಆರೀಸ್ ಎಂಬಾತನ ಜೊತೆ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಚಾರ ನಂಬದ ರಫೀಕ್ ಸುಮ್ಮನಾಗಿದ್ದ‌ನು.

ಆದರೆ ಇಂದು ಬೆಳಗ್ಗೆ ರಫೀಕ್ ಕೆಲಸಕ್ಕೆ ಹೋಗಿದ್ದಾನೆ. ಕೆಲಸ ಮುಗಿಸಿ ಮನೆಗೆ ವಾಪಸ್ಸಾಗಿ ನೋಡಿದಾಗ ಝೀನತ್ ಮನೆಯಲ್ಲಿರಲಿಲ್ಲ. ಇದರಿಂದ ಆತಂಕಗೊಂಡ ರಫೀಕ್ ಆಕೆಯನ್ನು ಹುಡುಕಿಕೊಂಡು ಕಾಡಿನೊಳಗೆ ಹೋಗಿದ್ದಾನೆ. ಅಲ್ಲಿ ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು. ಇನ್ನು ರಫೀಕ್ ನನ್ನು ನೋಡಿದ ಆರೀಸ್ ಹಾಗೂ ಝೀನತ್ ಆಟೋದಲ್ಲಿ ಪರಾರಿಯಾಗಿದ್ದರು. ನಂತರ ಮನೆಗೆ ಬಂದು ರಫೀಕ್ ಝೀನತ್ ಳಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ. ಸದ್ಯ ಕೊಲೆ ಪ್ರಕರಣ ಸಂಬಂಧ ಉಪ್ಪಿನಂಗಡಿ ಪೊಲೀಸರು ಆರೋಪಿ ರಫೀಕ್ ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

PM Modi 75th birthday: ಶುಭಾಶಯ ತಿಳಿಸಿದ ಡೊನಾಲ್ಡ್ ಟ್ರಂಪ್: ಭಾರತ-ಯುಎಸ್ ಸಂಬಂಧ ವೃದ್ಧಿ ಬಗ್ಗೆ ಉಭಯ ನಾಯಕರು ಚರ್ಚೆ

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ, 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ಕಳವು?

ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ Hindu ಉಪಜಾತಿ ಸೇರ್ಪಡೆ ವಿರುದ್ಧ ರಾಜ್ಯಪಾಲರಿಗೆ BJP ದೂರು!

ಸು...ರ್ ಕುಮಾರ್: ಹಸ್ತ ಲಾಘವ ಕೊಡದ ಟೀಂ ಇಂಡಿಯಾ ನಾಯಕನಿಗೆ ಅವಹೇಳನಕಾರಿ ಶಬ್ದದಿಂದ ನಿಂದಿಸಿದ ಪಾಕ್ ಮಾಜಿ ಕ್ರಿಕೆಟಿಗ

75ರ ವಸಂತಕ್ಕೆ ಕಾಲಿಡುತ್ತಿರುವ ನರೇಂದ್ರ ಮೋದಿ: ಜನರ ಪ್ರಧಾನಿಯ ಏಳು ಬೀಳುಗಳ ಸ್ಮರಣೀಯ ಪ್ರಯಾಣ

SCROLL FOR NEXT