ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ 10ನೇ ವಾರ್ಷಿಕ ಸರ್ವ ಸದಸ್ಯ ಸಮಿತಿ ಸಭೆಯಲ್ಲಿ ಪ್ರಿಯಾಂಕ್ ಖರ್ಗೆ 
ರಾಜ್ಯ

ಗ್ರಾಮೀಣ ಇಂಧನ ವ್ಯವಸ್ಥೆಗಳ ಉತ್ತೇಜಿಸಲು ನೂತನ ಜೈವಿಕ ಇಂಧನ ನೀತಿ ಜಾರಿಗೆ ಸರ್ಕಾರ ಮುಂದು..!

ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಹೊಸ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಇದು ಅಂತಿಮ ಹಂತದಲ್ಲಿದೆ.

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಸಲುವಾಗಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ 10ನೇ ವಾರ್ಷಿಕ ಸರ್ವ ಸದಸ್ಯ ಸಮಿತಿ ಸಭೆಯ ನಂತರ ಜೈವಿಕ ಇಂಧನ ನೀತಿಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಹೊಸ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಇದು ಅಂತಿಮ ಹಂತದಲ್ಲಿದೆ ಎಂದು ಹೇಳಿದರು.

ಈಗಾಗಲೇ ಕೆಲವು ಪೂರ್ವ ಸಿದ್ಧತಾ ಕಾರ್ಯಯೋಜನೆಗಳನ್ನು ಕೈಗೊಳ್ಳಲಾಗಿದೆ, ರಾಜ್ಯದಲ್ಲಿ ಹಾಗೂ ಇತರ ರಾಜ್ಯಗಳಿಗೆ ಭೇಟಿ ನೀಡಿ ಜೈವಿಕ ಇಂಧನ ಕಾರ್ಯಯೋಜನೆಗಳ ಅನುಷ್ಟಾನ ಪ್ರಕ್ರಿಯೆ ಹಾಗೂ ವಸ್ತುಸ್ಥಿತಿ ಅಧ್ಯಯನ ಮಾಡಲಾಗಿದೆ, ಇದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜೈವಿಕ ಇಂಧನ ನೀತಿಗಳ ವಿಶ್ಲೇಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಜೈವಿಕ ಇಂಧನ ಸಂಪನ್ಮೂಲಗಳ ಲಭ್ಯತೆ, ಕ್ರೋಢಿಕರಣ ಕುರಿತು ಪರಿಶೀಲನೆ ಮಾಡಲಾಗಿದ್ದು, ನೂತನ ಕರ್ನಾಟಕ ರಾಜ್ಯ ಜೈವಿಕ ಇಂಧನ ರಚನೆ ಕುರಿತು ಪ್ರಕ್ರಿಯೆ ಆರಂಭಿಸಲಾಗಿದೆ. ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಪೂರಕ ವಾತಾವರಣ ನಿರ್ಮಾಣ ಮಾಡುವ ಕುರಿತು ಸಮ್ಮೇಳನಗಳು, ಕಾರ್ಯಗಾರಗಳು, ವಸ್ತು ಪ್ರದರ್ಶನಗಳು ಹಾಗೂ ಹೂಡಿಕೆದಾರರ ಸಮಾವೇಶಗಳಲ್ಲಿ ಭಾಗವಹಿಸಿ ಮಾಹಿತಿ ಸಂಗ್ರಹಿಸಲಾಗಿದೆ ಹಾಗೂ ಮಂಡಳಿಗೆ ಕೈಗಾರಿಕಾ ಸಂಘಟನೆಗಳು, ಸಂಸ್ಥೆಗಳು, ವಿದೇಶದ ವಿಶ್ವವಿದ್ಯಾಲಯಗಳು ಮುಂತಾದ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಿ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿನ ಜೈವಿಕ ಇಂಧನ ಬಯೋಬ್ರಿಕೆಟ್ಸ್, ಬಯೋಪಿಲೆಟ್ಸ್, ಬಯೋಚಾರ್, ಬಯೋಕೋಲ್. ಬಯೋಡೀಸೆಲ್, 2ಜಿ ಎಥನಾಲ್, ಗ್ರೀನ್ ಹೈಡ್ರೋಜನ್ ಕಾರ್ಯ ಯೋಜನೆಗಳಲ್ಲಿ ನಿರತರಾಗಿರುವ ಉದ್ದಿಮೆದಾರರುಗಳ ವಿಚಾರ ವಿನಿಮಯ ಸಭೆಯನ್ನು ತುಮಕೂರು ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದು, ಮಾಹಿತಿ ಮಾಹಿತಿ ಸಂಗ್ರಹಿಸಲಾಗಿದೆ, ಶೀಘ್ರದಲ್ಲೇ ನೀತಿಯ ಕರಡು ಸಿದ್ಧಪಡಿಸಿ ಸಾರ್ವಜನಿಕರ ಅಭಿಪ್ರಾಯಕ್ಕಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT