ಪ್ರತಿಭಟನೆ ನಡೆಸುತ್ತಿರುವ ಪುರಸಭೆ ಸದಸ್ಯರು. 
ರಾಜ್ಯ

ಮೈಸೂರು: ಅಧಿಕಾರಿಗಳ ಉದಾಸೀನತೆ-ನಿರ್ಲಕ್ಷ್ಯ ವರ್ತನೆಗೆ ಬೇಸರ; ಪುರಸಭೆ ಸದಸ್ಯರಿಂದ ಅರೆಬೆತ್ತಲೆ ಪ್ರತಿಭಟನೆ!

ಕೋಟ್ಯಾಂತರ ರೂಪಾಯಿ ಮೌಲ್ಯದ ಪ್ರಮುಖ ಅಭಿವೃದ್ಧಿ ಕಾರ್ಯಗಳನ್ನು ವಿಳಂಬ ಮಾಡಲಾಗಿದ್ದು, ಸಂಪೂರ್ಣವಾಗಿ ನಿರ್ಪಕ್ಷಿಸಲಾಗಿದೆ.

ಮೈಸೂರು: ನಾಗರಿಕ ಅಧಿಕಾರಿಗಳ ಉದಾಸೀನತೆ ಮತ್ತು ನಿಷ್ಕ್ರಿಯತೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಎಚ್‌ಡಿ ಕೋಟೆ ಪುರಸಭೆ ಸದಸ್ಯರು ಅರೆಬೆತ್ತರಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.

ಮಿಲ್ ನಾಗರಾಜ್ ಅವರು ಪುರಸಭೆ ಕಚೇರಿಯ ಮುಂದೆ ಅರೆನಗ್ನ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗರಜ್ ಅವರು, ಕೋಟ್ಯಾಂತರ ರೂಪಾಯಿ ಮೌಲ್ಯದ ಪ್ರಮುಖ ಅಭಿವೃದ್ಧಿ ಕಾರ್ಯಗಳನ್ನು ವಿಳಂಬ ಮಾಡಲಾಗಿದ್ದು, ಸಂಪೂರ್ಣವಾಗಿ ನಿರ್ಪಕ್ಷಿಸಲಾಗಿದೆ. ಇದರಿಂದ ನಗರ ಸಂಕಷ್ಟಕ್ಕೆ ಸಿಲುಕಿದೆ. ಹಣ ಮಂಜೂರಾದರೂ ಅಭಿವೃದ್ಧಿ ಕಾರ್ಯಗಳ ಕೈಗೆತ್ತಿಕ್ಕೊಳ್ಳುತ್ತಿಲ್ಲ. ಒಳಚರಂಡಿ ವ್ಯವಸ್ಥೆಗಳ ನಿರ್ಮಾಣ ಪ್ರಾರಂಭವಾಗಿಲ್ಲ, ಸ್ವಚ್ಛತಾ ಅಭಿಯಾನಗಳು ಅನಿಯಮಿತವಾಗಿದ್ದು, ಮೂಲಭೂತ ನಾಗರಿಕ ನಿರ್ವಹಣೆಯನ್ನು ಗಾಳಿಗೆ ತೂರಲಾಗಿದೆ ಎಂದು ಹೇಳಿದರು.

ಅಮೃತ್ (ಅಟಲ್ ಮಿಷನ್ ಫಾರ್ ರಿಜುವನೇಷನ್ ಅಂಡ್ ಅರ್ಬನ್ ಟ್ರಾನ್ಸ್‌ಫರ್ಮೇಷನ್) ಯೋಜನೆಯಡಿ ಮೂಲಸೌಕರ್ಯ ಅಭಿವೃದ್ಧಿಗಾಗಿ ರೂ.32 ಕೋಟಿ ಹಂಚಿಕೆ ಮಾಡಲಾಗಿದ್ದು, ಯೋಜನೆ ಇನ್ನೂ ಅನುಷ್ಠಾನಗೊಂಡಿಲ್ಲ, ಯಾವುದೇ ಪ್ರಗತಿ ಕಂಡು ಬಂದಿಲ್ಲ ಎಂದು ದೂರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT