ಪ್ರತಿಭಟನೆ ನಡೆಸುತ್ತಿರುವ ಪುರಸಭೆ ಸದಸ್ಯರು. 
ರಾಜ್ಯ

ಮೈಸೂರು: ಅಧಿಕಾರಿಗಳ ಉದಾಸೀನತೆ-ನಿರ್ಲಕ್ಷ್ಯ ವರ್ತನೆಗೆ ಬೇಸರ; ಪುರಸಭೆ ಸದಸ್ಯರಿಂದ ಅರೆಬೆತ್ತಲೆ ಪ್ರತಿಭಟನೆ!

ಕೋಟ್ಯಾಂತರ ರೂಪಾಯಿ ಮೌಲ್ಯದ ಪ್ರಮುಖ ಅಭಿವೃದ್ಧಿ ಕಾರ್ಯಗಳನ್ನು ವಿಳಂಬ ಮಾಡಲಾಗಿದ್ದು, ಸಂಪೂರ್ಣವಾಗಿ ನಿರ್ಪಕ್ಷಿಸಲಾಗಿದೆ.

ಮೈಸೂರು: ನಾಗರಿಕ ಅಧಿಕಾರಿಗಳ ಉದಾಸೀನತೆ ಮತ್ತು ನಿಷ್ಕ್ರಿಯತೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಎಚ್‌ಡಿ ಕೋಟೆ ಪುರಸಭೆ ಸದಸ್ಯರು ಅರೆಬೆತ್ತರಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.

ಮಿಲ್ ನಾಗರಾಜ್ ಅವರು ಪುರಸಭೆ ಕಚೇರಿಯ ಮುಂದೆ ಅರೆನಗ್ನ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗರಜ್ ಅವರು, ಕೋಟ್ಯಾಂತರ ರೂಪಾಯಿ ಮೌಲ್ಯದ ಪ್ರಮುಖ ಅಭಿವೃದ್ಧಿ ಕಾರ್ಯಗಳನ್ನು ವಿಳಂಬ ಮಾಡಲಾಗಿದ್ದು, ಸಂಪೂರ್ಣವಾಗಿ ನಿರ್ಪಕ್ಷಿಸಲಾಗಿದೆ. ಇದರಿಂದ ನಗರ ಸಂಕಷ್ಟಕ್ಕೆ ಸಿಲುಕಿದೆ. ಹಣ ಮಂಜೂರಾದರೂ ಅಭಿವೃದ್ಧಿ ಕಾರ್ಯಗಳ ಕೈಗೆತ್ತಿಕ್ಕೊಳ್ಳುತ್ತಿಲ್ಲ. ಒಳಚರಂಡಿ ವ್ಯವಸ್ಥೆಗಳ ನಿರ್ಮಾಣ ಪ್ರಾರಂಭವಾಗಿಲ್ಲ, ಸ್ವಚ್ಛತಾ ಅಭಿಯಾನಗಳು ಅನಿಯಮಿತವಾಗಿದ್ದು, ಮೂಲಭೂತ ನಾಗರಿಕ ನಿರ್ವಹಣೆಯನ್ನು ಗಾಳಿಗೆ ತೂರಲಾಗಿದೆ ಎಂದು ಹೇಳಿದರು.

ಅಮೃತ್ (ಅಟಲ್ ಮಿಷನ್ ಫಾರ್ ರಿಜುವನೇಷನ್ ಅಂಡ್ ಅರ್ಬನ್ ಟ್ರಾನ್ಸ್‌ಫರ್ಮೇಷನ್) ಯೋಜನೆಯಡಿ ಮೂಲಸೌಕರ್ಯ ಅಭಿವೃದ್ಧಿಗಾಗಿ ರೂ.32 ಕೋಟಿ ಹಂಚಿಕೆ ಮಾಡಲಾಗಿದ್ದು, ಯೋಜನೆ ಇನ್ನೂ ಅನುಷ್ಠಾನಗೊಂಡಿಲ್ಲ, ಯಾವುದೇ ಪ್ರಗತಿ ಕಂಡು ಬಂದಿಲ್ಲ ಎಂದು ದೂರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಛತ್ತೀಸ್‌ಗಢ: ವರ್ಷದ ಆರಂಭದಲ್ಲೇ ಭರ್ಜರಿ ಭೇಟಿ: 'ಎನ್‌ಕೌಂಟರ್‌' ನಲ್ಲಿ 14 ನಕ್ಸಲೀಯರ ಹತ್ಯೆ!

VB-G RAM G ಜಾರಿ ಬದಲು ಸ್ವಂತ ಉದ್ಯೋಗ ಖಾತ್ರಿ ಯೋಜನೆಗೆ ಕರ್ನಾಟಕ ಮುಂದು: ಇಂದು ಘೋಷಣೆ?

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ಗಲಾಟೆ: ಆರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

ನೈಸ್‌ ಯೋಜನೆ: ಡಿ.ಕೆ ಶಿವಕುಮಾರ್ ಆಕ್ಷೇಪ ಸ್ವಾಗತಾರ್ಹ; ಕ್ರಮ ಕೈಗೊಳ್ಳುತ್ತಾರೆಯೇ ಕಾದು ನೋಡೋಣ- ದೇವೇಗೌಡ

SCROLL FOR NEXT