ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಶಾಸಕರಿಗೆ ಬಂಪರ್: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ ಅನುದಾನ; ಸಿಎಂ ಸಿದ್ದರಾಮಯ್ಯ ಘೋಷಣೆ!

2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು: ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಅನುದಾನದ ಕೊರತೆ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷದ ಶಾಸಕರಲ್ಲೂ ಅಸಮಾಧಾನವಿದೆ. ಈ ಸಂಬಂಧ ಜುಲೈ 15 ರಂದು ಶಾಸಕರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಸಿಎಂ ಮೂಲಸೌಲಭ್ಯ ಅಭಿವೃದ್ಧಿ ಕಾರ್ಯಕ್ರಮದಡಿ, 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇದರಲ್ಲಿ ಲೋಕೋಪಯೋಗಿ ಇಲಾಖೆ, ರಸ್ತೆ ಮತ್ತು ಸೇತುವೆ ಕೆಲಸ, ಗ್ರಾಮಾಂತರ ರಸ್ತೆ, ಸೇತುವೆ ಮತ್ತು ನಗರ ಪ್ರದೇಶದ ಕಾಮಗಾರಿಗೆ ರೂ. 37.50 ಕೋಟಿ ಮತ್ತು ಶಾಸಕರು ತಮ್ಮ ವಿವೇಚನೆಯಿಂದ ಆಯ್ಕೆ ಮಾಡಬಹುದಾದ ಇತರೆ ಇಲಾಖಾ ಕಾಮಗಾರಿಗಳಿಗೆ ರೂ. 12.50 ಕೋಟಿ ನೀಡಲಾಗುತ್ತಿದೆ.

ಶಾಸಕರು ತಮ್ಮ ಬೇಡಿಕೆ ಪತ್ರದೊಂದಿಗೆ ನಿಗದಿತ ನಮೂನೆಯಲ್ಲಿ ಕಾಮಗಾರಿಗಳ ವಿವರಗಳನ್ನು ಮುಖ್ಯಮಂತ್ರಿಗಳಿಗೆ ನೀಡುವಂತೆ ಸೂಚಿಸಲಾಗಿದೆ. ಜುಲೈ 30 ಮತ್ತು 31 ರಂದು ಕೊಠಡಿ ಸಂಖ್ಯೆ-313, ಸಮಿತಿ ಕೊಠಡಿ, 3ನೇ ಮಹಡಿ, ವಿಧಾನಸೌಧದಲ್ಲಿ ಶಾಸಕರ ಜಿಲ್ಲಾವಾರು ಸಭೆ ಏರ್ಪಡಿಸಲಾಗಿದ್ದು, ಕಾಮಗಾರಿಗಳ ವಿವರಗಳೊಂದಿಗೆ ಶಾಸಕರು ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ಪತ್ರದಲ್ಲಿ ಕಾಂಗ್ರೆಸ್ ಶಾಸಕರಿಗೆ ಮಾತ್ರ ಹಣ ಹಂಚಿಕೆ ಎಂದು ಎಲ್ಲಿಯೂ ಸೂಚಿಸಿಲ್ಲವಾದರೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಾರತಮ್ಯದ ಆರೋಪ ಮಾಡಿವೆ. ಎಲ್ಲ ಶಾಸಕರಿಗೂ ಹಣ ಬಿಡುಗಡೆ ಮಾಡಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ರೂ. 25 ಕೋಟಿ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಪಿಸಿದ ವಿಪಕ್ಷ ನಾಯಕ ಆರ್. ಅಶೋಕ, ಸಮತೋಲಿತ ಅಭಿವೃದ್ಧಿಗೆ ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ತಮ್ಮ ಕ್ಷೇತ್ರಗಳಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿಕೊಳ್ಳುತ್ತಿದ್ದಾರೆ. ಈಗ ರೂ. 50 ಕೋಟಿ ಅನುದಾನ ನೀಡುವ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ರೂ. 25 ಕೋಟಿ ನೀಡಲಾಗುವ ಬಗ್ಗೆ ಮಾಹಿತಿ ಇದೆ. ಆದರೆ ಇನ್ನೂ ಯಾವುದೇ ಗ್ಯಾರಂಟಿ ಇಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ರಾಜ್ಯಕ್ಕೆ ಸಿಎಂ ಆಗಿದ್ದಾರೋ ಅಥವಾ ಕಾಂಗ್ರೆಸ್ ಶಾಸಕರಿಗೆ ಮಾತ್ರ ಸಿಎಂ ಆಗಿರುವರೇ ಎಂದು ಜೆಡಿಎಸ್ ಪ್ರಶ್ನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾ: I-PAC ಮೇಲಿನ ED ದಾಳಿ ವಿರುದ್ಧ ಬೀದಿಗಿಳಿದ ಪಶ್ಚಿಮ ಬಂಗಾಳ ಸಿಎಂ ಮಮತಾ

ಬೆಂಗಳೂರು: ಮನನೊಂದು ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಆಡಳಿತ ಮಂಡಳಿ ಕಿರುಕುಳ ಆರೋಪ

ಬೆಂಗಳೂರು: ಕಗ್ಗದಾಸಪುರ ಜಂಕ್ಷನ್ ನಲ್ಲಿ ಬಿಗ್ ಫೈಟ್! Zepto ರೈಡರ್ ಥಳಿಸಿದ ಬೈಕ್ ಸವಾರರಿಗೆ ಜನರಿಂದ ಗೂಸಾ! Video

ಪ್ರಹ್ಲಾದ್ ಜೋಶಿ ಮೊದಲು ಚುನಾವಣಾ ಬಾಂಡ್‌, PM ಕೇರ್ಸ್‌ ಬಗ್ಗೆ ಉತ್ತರಿಸಲಿ: ದಿನೇಶ್ ಗುಂಡೂರಾವ್

Iran Protests ನಡುವೆ ರೆಜಾ ಪಹ್ಲವಿ ಸದ್ದು: ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕರೆ ನೀಡುತ್ತಿರುವ ಈ ಪ್ರಭಾವಿ ವ್ಯಕ್ತಿ ಯಾರು?

SCROLL FOR NEXT