ಸಿಎಂ ಸಿದ್ದರಾಮಯ್ಯ, ಸಚಿವ ಡಾ. ಹೆಚ್. ಸಿ. ಮಹಾದೇವಪ್ಪ ಮತ್ತಿತರರು 
ರಾಜ್ಯ

ಸ್ವಾತಂತ್ರ್ಯ ಬಂದು 78 ವರ್ಷವಾದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು

ಮೈಸೂರು: ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.

ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದರು.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ಕೆಎಎಸ್ ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ವೈಚಾರಿಕತೆ, ವೈಜ್ಞಾನಿಕ‌ ಮನೋಭಾವ ಬಗ್ಗೆ ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ವಿದ್ಯಾವಂತರೂ ಕೂಡ ಹಣೆಬರಹ, ಕರ್ಮಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡವರಿದ್ದಾರೆ. ದೇವರು ಹಾಗೆಲ್ಲಾ ತಾರತಮ್ಯ ಮಾಡಲು ಸಾಧ್ಯವೇ?ಎಂದು ಪ್ರಶ್ನಿಸಿದರು.

ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ರಿನೀವಲ್ ಮಾಡಿಕೊಳ್ಳಬೇಕು. ಆದರೆ ಅಧಿಕಾರಿಗಳಿಗೆ ಈ ಪರಿಸ್ಥಿತಿ ಇಲ್ಲ. ಸರ್ಕಾರ ರೂಪಿಸುವ ಜನಪರವಾದ ಕಾರ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.

ಅವಕಾಶ ಇಲ್ಲದ ಬಹಳ ಮಂದಿ ಬುದ್ದಿವಂತರು ಸಮಾಜದಲ್ಲಿ ತುಂಬಿದ್ದಾರೆ. ಅವರಿಗೆ ಅವಕಾಶ ಸಿಕ್ಕಾಗ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದ ಮುಖ್ಯಮಂತ್ರಿ, ಸಂವಿಧಾನದ ಆಶಯಗಳು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇದನ್ನು ಸರಿಯಾಗಿ ನಿರ್ವಹಿಸೋಣ, ಕರ್ತವ್ಯಲೋಪ ಆಗುವುದು ಬೇಡ. ಸಮಾಜದ ಋಣ ನಮ್ಮ ಮೇಲಿದೆ. ಇದನ್ನು ಮರೆಯಬಾರದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

"ದೇಶದ ಭದ್ರತೆಗೆ ಧಕ್ಕೆ ತಂದ್ರೆ ಬಿಡಲ್ಲ": ರಿಸಿನ್ ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕನಿಗೆ ಜೈಲಿನಲ್ಲಿ ಕೈದಿಗಳಿಂದ ಧರ್ಮದೇಟು; ವೈದ್ಯ ಉಗ್ರ ಆಸ್ಪತ್ರೆಗೆ ದಾಖಲು!

News headlines 21-11-2025| CM ಬದಲಾವಣೆ ವಿಷಯ; ಶಾಸಕರಿಗೆ ಹೈಕಮಾಂಡ್ ಮಹತ್ವದ ಸೂಚನೆ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ; ಹಡಗು ನಿರ್ಮಾಣ, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಬ್ಬರ ಬಂಧನ

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ, ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ

BBK 12: ನಿರೂಪಕ ಕಿಚ್ಚ ಸುದೀಪ್, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು! ಯಾಕೆ ಗೊತ್ತಾ?

SCROLL FOR NEXT