ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು!

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕು. ಆಗಲೂ ಇ-ಕೆವೈಸಿ ಮಾಡಿಸದೆ ಇದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸುವ ಎಚ್ಚರಿಕೆ ನೀಡಿ.

ಮೈಸೂರು: ರಾಜ್ಯದಲ್ಲಿ ಪಡಿತರ ಚೀಟಿದಾರರು ಇ- ಕೆವೈಸಿಯನ್ನು ಆದಷ್ಟು ಬೇಗನೆ ಮಾಡಿಸಬೇಕು. ಮಾಡಿಸದಿದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಸೂಚನೆ ನೀಡಿದ್ದಾರೆ.

ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು ಅವರು, ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕು. ಆಗಲೂ ಇ-ಕೆವೈಸಿ ಮಾಡಿಸದೆ ಇದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸುವ ಎಚ್ಚರಿಕೆ ನೀಡಿಬೇಕು. ಬಾಕಿ ಇರುವ ಇ-ಕೆವೈಸಿ ಪ್ರಕ್ರಿಯೆಗಳು ವಿಳಂಬವಿಲ್ಲದೆ ಪೂರ್ಣಗೊಳ್ಳುವಂತೆ ತಕ್ಷಣ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಒತ್ತಾಯಿಸಿದರು.

ಅನಗತ್ಯವಾಗಿ ಕಾರ್ಡುಗಳು ವಿತರಣೆ ಆದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾನೂನು ಮಾಪನ ಶಾಸ್ತ್ರ ಇಲಾಖೆಗೆ ಬೇಕಿರುವ ವಾಹನ ಸೌಲಭ್ಯ ಹಾಗೂ ಕಾನೂನು ಮಾಪನ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಆಹಾರ ಧಾನ್ಯಗಳು ಗೋದಾಮುಗಳಲ್ಲಿ ಹಾಳಾಗದಂತೆ ನೋಡಿಕೊಳ್ಳಿ. ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸುವ ಆಹಾರ ಧಾನ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಣೆ ಮಾಡಬೇಕು ಎಂದೂ ಸೂಚನೆ ನೀಡಿದರು.

ಆಹಾರ ಸರಬರಾಜು, ಆಹಾರ ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಯೋಜನಾ ಕಾರ್ಯಕ್ರಮ ಸಂಯೋಜನೆ ಹಾಗೂ ಸ್ಯಾಂಖಿಕ ಇಲಾಖೆಯ ಇಲಾಖೆಯ ಕಾರ್ಯದರ್ಶಿಗಳಾದ ಮನೋಜ್ ಜೈನ್ ಅವರು ಮಾತನಾಡಿ, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇಲಾಖೆಯ ಇತರ ಅಧಿಕಾರಿಗಳಿಗೆ ಹೆಚ್ಚುವರಿ ಪ್ರಭಾರ ನೀಡಿ, ಖಾಲಿ ಇರುವ ಆಹಾರ ನಿರೀಕ್ಷಕರ ಹುದ್ದೆಗಳಿಗೆ ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರಿಗೆ ಪ್ರಭಾರ ನೀಡುವಂತೆ ಸೂಚನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

BBK 13: 'ಅಗ್ನಿಪರೀಕ್ಷೆ' ಸುತ್ತಿನಲ್ಲಿ ಸ್ಪರ್ಧಿಗಳಿಗೆ ಟಾರ್ಚರ್‌, ಭಾರಿ ಟ್ರೋಲ್, ಸಂಗೀತಾ ಸಮರ್ಥನೆ, ಜಿ.ಕೆ. ಪೂರ್ಣಿಮಾ ಮೊದಲ ‘ಸ್ಟಾರ್ ಕಂಟೆಸ್ಟೆಂಟ್’!