ಗೃಹ ಸಚಿವ ಡಾ.ಜಿ.ಪರಮೇಶ್ವರ್ 
ರಾಜ್ಯ

ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಚಾಲನೆ

ಪೊಲೀಸರನ್ನು ಸಹೋದರರಂತೆ ನೋಡಬೇಕು. ಜನರ ಮನೆ ಬಾಗಿಲಿಗೆ ಹೋಗಿ, ಅವರ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸಲು ಸಹಾಯ ಮಾಡೋಣ. ಇದು ಸಕಾರಾತ್ಮಕ ಸಾರ್ವಜನಿಕ ಗ್ರಹಿಕೆಯನ್ನು ಬೆಳೆಸಲು ಸಹಾಯ ಮಾಡುತ್ತದೆ.

ಬೆಂಗಳೂರು: 'ಜನ ಸ್ನೇಹಿ ಆಡಳಿತ' ಜಾರಿಗೆ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ 'ಮನೆ-ಮನೆಗೆ ಪೊಲೀಸ್' ಎಂಬ ವಿನೂತನ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಚಾಲನೆ ನೀಡಿದರು.

ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರ ದುಃಖ-ದುಮ್ಮಾನ ಕೇಳಲು ಬರುವ ಪೊಲೀಸರ ಕಾರ್ಯಕ್ಕೆ ಹಸಿರು ಬಾವುಟ ತೋರಿಸಿ ಸಚಿವರು ಮಾತನಾಡಿದರು.

ವಿನೂತನ ಕಾರ್ಯಕ್ರಮದ ಭಾಗವಾಗಿ, ಪರಮೇಶ್ವರ, ಗೋವಿಂದರಾಜನಗರ ಶಾಸಕ ಪ್ರಿಯಾಕೃಷ್ಣ, ಡಿಜಿ ಮತ್ತು ಐಜಿಪಿ ಎಂಎ ಸಲೀಂ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮತ್ತು ಇತರ ಹಿರಿಯ ಅಧಿಕಾರಿಗಳು ಹಲವಾರು ಮನೆಗಳಿಗೆ ಭೇಟಿ ನೀಡಿದರು. ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ನಿವಾಸಿಗಳ ಕುಂದುಕೊರತೆಗಳನ್ನು ಪರಿಹರಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಪರಮೇಶ್ವರ್, ದೇಶದಲ್ಲಿ ಇಂತಹ ಉಪಕ್ರಮವನ್ನು ಜಾರಿಗೆ ತರುತ್ತಿರುವುದು ಇದೇ ಮೊದಲು. "ಬೇರೆ ಯಾವುದೇ ರಾಜ್ಯವೂ ಈ ರೀತಿಯ ಕಾರ್ಯಕ್ರಮವನ್ನು ಪರಿಚಯಿಸಿಲ್ಲ. ಇದು ರಾಷ್ಟ್ರವ್ಯಾಪಿ ಯಶಸ್ವಿ ಮಾದರಿಯಾಗಲಿದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದರು.

ಪೊಲೀಸರನ್ನು ಸಹೋದರರಂತೆ ನೋಡಬೇಕು. ಜನರ ಮನೆ ಬಾಗಿಲಿಗೆ ಹೋಗಿ, ಅವರ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸಲು ಸಹಾಯ ಮಾಡೋಣ. ಇದು ಸಕಾರಾತ್ಮಕ ಸಾರ್ವಜನಿಕ ಗ್ರಹಿಕೆಯನ್ನು ಬೆಳೆಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

ಪ್ರತಿ ದಿನ ಪೊಲೀಸರು ಗಸ್ತು ನಡೆಸುತ್ತಾರೆ. ಯಾವ ಮನೆಗೆ ಯಾರು ಬಂದಿದ್ದಾರೆ, ಏನು ಕೆಲಸ ಮಾಡುತ್ತಾರೆ, ಯಾವ ಸಮಸ್ಯೆಗಳಿವೆ ಎಂಬ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಾರೆ. ಈ ಎಲ್ಲ ಡೇಟಾ ಪೊಲೀಸರ ಬಳಿ ಇರುತ್ತದೆ. ನೆರೆಹೊರೆಯಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿದ್ದರೆ, ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಡ್ರಗ್ಸ್ ಚಟುವಟಿಕೆ ಸೇರಿದಂತೆ ಎಲ್ಲ ಮಾಹಿತಿಯನ್ನು ಪೊಲೀಸರೊಂದಿಗೆ ಹಂಚಿಕೊಳ್ಳಬಹುದು. ಈ ಎಲ್ಲ ದತ್ತಾಂಶವನ್ನು ಡಿಜಿಟಲೈಸ್ ಮಾಡಿಕೊಳ್ಳಲಾಗುತ್ತದೆ. ಬೀಟ್ ಸಿಬ್ಬಂದಿಗೆ ಟ್ಯಾಬ್‌ಗಳನ್ನು ನೀಡಲಾಗುತ್ತದೆ.

ಸಮಾಜದಲ್ಲಿ ಕೆಲ ಬಾರಿ ಜನಪ್ರತಿನಿಧಿಗಳು, ಉದ್ಯಮಿಗಳು ಹಾಗೂ ಸಾಹಿತಿಗಳು ಟಾರ್ಗೆಟ್ ಆಗಿರುತ್ತಾರೆ. ಈ ಬಗ್ಗೆ ನಿಗಾವಹಿಸಲು ಸಹಾಯವಾಗುತ್ತದೆ. ನಮ್ಮದು ಕ್ರಿಯಾಶೀಲವಾಗಿ ಕೆಲಸ ಮಾಡುವ ಇಲಾಖೆ ಆಗಿದೆ ಎಂದರು.

ನಂತರ, ಪರಮೇಶ್ವರ ಅವರು ವಿವಿಧ ಜಿಲ್ಲೆಗಳ ಇತರ ಪೊಲೀಸ್ ಆಯುಕ್ತರು ಮತ್ತು ಎಸ್‌ಪಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

ಕಾರ್ಯಕ್ರಮದ ಕೊನೆಯಲ್ಲಿ, ಗೃಹ ಸಚಿವರು, ಇತರ ಅಧಿಕಾರಿಗಳೊಂದಿಗೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಸಂಚಾರ, ಮೆಟ್ರೋ ಮತ್ತು ಇತರ ನಾಗರಿಕ ಕಾಳಜಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

'ಜೀವ ಬಾಯಿಗೆ ಬಂದಿತ್ತು': ಆಗಸದಲ್ಲೇ ಗಿರಕಿ ಹೊಡೆದ ಡಿಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ, ಕೆಲಕಾಲ ಆತಂಕ! ಆಗಿದ್ದೇನು?

SCROLL FOR NEXT