ಗೃಹ ಸಚಿವ ಡಾ.ಜಿ.ಪರಮೇಶ್ವರ್ 
ರಾಜ್ಯ

ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಚಾಲನೆ

ಪೊಲೀಸರನ್ನು ಸಹೋದರರಂತೆ ನೋಡಬೇಕು. ಜನರ ಮನೆ ಬಾಗಿಲಿಗೆ ಹೋಗಿ, ಅವರ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸಲು ಸಹಾಯ ಮಾಡೋಣ. ಇದು ಸಕಾರಾತ್ಮಕ ಸಾರ್ವಜನಿಕ ಗ್ರಹಿಕೆಯನ್ನು ಬೆಳೆಸಲು ಸಹಾಯ ಮಾಡುತ್ತದೆ.

ಬೆಂಗಳೂರು: 'ಜನ ಸ್ನೇಹಿ ಆಡಳಿತ' ಜಾರಿಗೆ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ 'ಮನೆ-ಮನೆಗೆ ಪೊಲೀಸ್' ಎಂಬ ವಿನೂತನ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಚಾಲನೆ ನೀಡಿದರು.

ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರ ದುಃಖ-ದುಮ್ಮಾನ ಕೇಳಲು ಬರುವ ಪೊಲೀಸರ ಕಾರ್ಯಕ್ಕೆ ಹಸಿರು ಬಾವುಟ ತೋರಿಸಿ ಸಚಿವರು ಮಾತನಾಡಿದರು.

ವಿನೂತನ ಕಾರ್ಯಕ್ರಮದ ಭಾಗವಾಗಿ, ಪರಮೇಶ್ವರ, ಗೋವಿಂದರಾಜನಗರ ಶಾಸಕ ಪ್ರಿಯಾಕೃಷ್ಣ, ಡಿಜಿ ಮತ್ತು ಐಜಿಪಿ ಎಂಎ ಸಲೀಂ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮತ್ತು ಇತರ ಹಿರಿಯ ಅಧಿಕಾರಿಗಳು ಹಲವಾರು ಮನೆಗಳಿಗೆ ಭೇಟಿ ನೀಡಿದರು. ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ನಿವಾಸಿಗಳ ಕುಂದುಕೊರತೆಗಳನ್ನು ಪರಿಹರಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಪರಮೇಶ್ವರ್, ದೇಶದಲ್ಲಿ ಇಂತಹ ಉಪಕ್ರಮವನ್ನು ಜಾರಿಗೆ ತರುತ್ತಿರುವುದು ಇದೇ ಮೊದಲು. "ಬೇರೆ ಯಾವುದೇ ರಾಜ್ಯವೂ ಈ ರೀತಿಯ ಕಾರ್ಯಕ್ರಮವನ್ನು ಪರಿಚಯಿಸಿಲ್ಲ. ಇದು ರಾಷ್ಟ್ರವ್ಯಾಪಿ ಯಶಸ್ವಿ ಮಾದರಿಯಾಗಲಿದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದರು.

ಪೊಲೀಸರನ್ನು ಸಹೋದರರಂತೆ ನೋಡಬೇಕು. ಜನರ ಮನೆ ಬಾಗಿಲಿಗೆ ಹೋಗಿ, ಅವರ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸಲು ಸಹಾಯ ಮಾಡೋಣ. ಇದು ಸಕಾರಾತ್ಮಕ ಸಾರ್ವಜನಿಕ ಗ್ರಹಿಕೆಯನ್ನು ಬೆಳೆಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

ಪ್ರತಿ ದಿನ ಪೊಲೀಸರು ಗಸ್ತು ನಡೆಸುತ್ತಾರೆ. ಯಾವ ಮನೆಗೆ ಯಾರು ಬಂದಿದ್ದಾರೆ, ಏನು ಕೆಲಸ ಮಾಡುತ್ತಾರೆ, ಯಾವ ಸಮಸ್ಯೆಗಳಿವೆ ಎಂಬ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಾರೆ. ಈ ಎಲ್ಲ ಡೇಟಾ ಪೊಲೀಸರ ಬಳಿ ಇರುತ್ತದೆ. ನೆರೆಹೊರೆಯಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿದ್ದರೆ, ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಡ್ರಗ್ಸ್ ಚಟುವಟಿಕೆ ಸೇರಿದಂತೆ ಎಲ್ಲ ಮಾಹಿತಿಯನ್ನು ಪೊಲೀಸರೊಂದಿಗೆ ಹಂಚಿಕೊಳ್ಳಬಹುದು. ಈ ಎಲ್ಲ ದತ್ತಾಂಶವನ್ನು ಡಿಜಿಟಲೈಸ್ ಮಾಡಿಕೊಳ್ಳಲಾಗುತ್ತದೆ. ಬೀಟ್ ಸಿಬ್ಬಂದಿಗೆ ಟ್ಯಾಬ್‌ಗಳನ್ನು ನೀಡಲಾಗುತ್ತದೆ.

ಸಮಾಜದಲ್ಲಿ ಕೆಲ ಬಾರಿ ಜನಪ್ರತಿನಿಧಿಗಳು, ಉದ್ಯಮಿಗಳು ಹಾಗೂ ಸಾಹಿತಿಗಳು ಟಾರ್ಗೆಟ್ ಆಗಿರುತ್ತಾರೆ. ಈ ಬಗ್ಗೆ ನಿಗಾವಹಿಸಲು ಸಹಾಯವಾಗುತ್ತದೆ. ನಮ್ಮದು ಕ್ರಿಯಾಶೀಲವಾಗಿ ಕೆಲಸ ಮಾಡುವ ಇಲಾಖೆ ಆಗಿದೆ ಎಂದರು.

ನಂತರ, ಪರಮೇಶ್ವರ ಅವರು ವಿವಿಧ ಜಿಲ್ಲೆಗಳ ಇತರ ಪೊಲೀಸ್ ಆಯುಕ್ತರು ಮತ್ತು ಎಸ್‌ಪಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

ಕಾರ್ಯಕ್ರಮದ ಕೊನೆಯಲ್ಲಿ, ಗೃಹ ಸಚಿವರು, ಇತರ ಅಧಿಕಾರಿಗಳೊಂದಿಗೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಸಂಚಾರ, ಮೆಟ್ರೋ ಮತ್ತು ಇತರ ನಾಗರಿಕ ಕಾಳಜಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆ ರಾಜಕೀಯ ಜೀವನ ಮುಗಿಯಿತು; ಯತೀಂದ್ರ ಹೇಳಿಕೆಯಿಂದ ಸಂಚಲನ, ರಾಜಕೀಯ ಜೀವನದ ಕೊನೆಗಾಲದಲ್ಲೂ ಡಿಕೆಶಿಗೆ ಚೆಕ್‌ಮೇಟ್ ನೀಡಲು ಸಿದ್ದು ಟೀಮ್ ಮುಂದು..!

ಬ್ಯುಸಿನೆಸ್ ಕಾರಿಡಾರ್'ಗಾಗಿ ಭೂಮಿ ಕಳೆದುಕೊಂಡವರಿಗೆ 3 ಪಟ್ಟು ಪರಿಹಾರ: ರಾಜ್ಯ ಸರ್ಕಾರ

ವಂಚನೆ ಪ್ರಕರಣದಲ್ಲಿ ದೋಷಿಯಾಗಿದ್ದ RJD ಮಾಜಿ ಶಾಸಕ ಅನಿಲ್ ಸಹಾನಿ BJP ಸೇರ್ಪಡೆ

ನಾನು ಹೆಮ್ಮೆಯ ಕನ್ನಡತಿ, ಕನ್ನಡ ಅದ್ಭುತ ಭಾಷೆ: ಕಿರಣ್ ಮಜುಂದಾರ್ ಶಾ

ಬಿಹಾರ: ಹಳಿ ದಾಟುತ್ತಿದ್ದ ವೇಳೆ ರೈಲು ಹರಿದು ನಾಲ್ವರ ದುರ್ಮರಣ; ದೀಪಾವಳಿ ಜಾತ್ರೆ ಮುಗಿಸಿ ಮನೆಗೆ ಹೋಗುವಾಗ ದುರಂತ

SCROLL FOR NEXT