ಕನ್ನಡ ಧ್ವಜ (ಸಂಗ್ರಹ ಚಿತ್ರ) 
ರಾಜ್ಯ

7 ವರ್ಷಗಳ ಬಳಿಕ ಮತ್ತೆ ಕನ್ನಡ ಧ್ವಜಕ್ಕೆ ಹಕ್ಕು ಮಂಡಿಸಿದ ಸರ್ಕಾರ: ಕೇಂದ್ರಕ್ಕೆ ಸಚಿವ Shivaraj Thangadagi ಪತ್ರ!

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಬರೀ ಹೆಸರಿಗೆ ಮಾತ್ರ ಇದೆ. ಈಗಿರುವ ಕನ್ನಡದ ಬಾವುಟ ಅಧಿಕೃತ ಅಲ್ಲ. ಅದೇ ಬಾವುಟ ಅಧಿಕೃತಗೊಳಿಸಿ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದೇವೆ...

ಬೆಂಗಳೂರು: 7 ವರ್ಷಗಳ ಬಳಿಕ ರಾಜ್ಯ ಸರ್ಕಾರ ಕನ್ನಡ ಧ್ವಜಕ್ಕೆ (Kannada flag) ಮತ್ತೆ ಹಕ್ಕು ಮಂಡಿಸಿದ್ದು, ಹಳದಿ-ಕೆಂಪು ಬಾವುಟಕ್ಕೆ ಅಧಿಕೃತ ಮಾನ್ಯತೆ ಕೊಡುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಚಾರವಾಗಿ ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಶಿವರಾಜ ತಂಗಡಗಿ, 'ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಬರೀ ಹೆಸರಿಗೆ ಮಾತ್ರ ಇದೆ. ಈಗಿರುವ ಕನ್ನಡದ ಬಾವುಟ ಅಧಿಕೃತ ಅಲ್ಲ. ಅದೇ ಬಾವುಟ ಅಧಿಕೃತಗೊಳಿಸಿ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದೇವೆ' ಎಂದು ತಿಳಿಸಿದರು.

ಅಂತೆಯೇ ಶೀಘ್ರದಲ್ಲೇ ತಂಗಡಗಿ ನೇತೃತ್ವದ ನಿಯೋಗ ದೆಹಲಿಗೆ ತೆರಳಲಿದ್ದು, ಕೇಂದ್ರದ ಸಂಸ್ಕೃತಿ ಸಚಿವರ ಭೇಟಿ ಮಾಡಲಿದ್ದಾರೆ. ಆ ಮೂಲಕ ಕನ್ನಡ ಬಾವುಟಕ್ಕೆ ಅಧಿಕೃತತೆ ಹಾಗೂ ಶಾಸ್ತ್ರೀಯ ಭಾಷೆ ಅನುದಾನ ಕೋರಿ ಮನವಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.

'ಕನ್ನಡ ಬಾವುಟಕ್ಕೆ ಒಪ್ಪಿಗೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ. ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಶೋಭಾ ಕರಂದ್ಲಾಜೆ ಮಾತಾಡುತ್ತಾರೆ. ದಯಮಾಡಿ ಕೇಂದ್ರದಿಂದ ಕನ್ನಡ ಬಾವುಟಕ್ಕೆ ಒಪ್ಪಿಗೆ ಕೊಡಿಸಲಿ. ಶಾಸ್ತ್ರೀಯ ಸ್ಥಾನಮಾನ ವಿಚಾರದಲ್ಲಿ ಅನುದಾನ ಕೊಡಿಸಲಿ. ತಮಿಳುನಾಡಿಗೆ ಹೆಚ್ಚಿನ ಅನುದಾನ ನೀಡಲಾಗುತ್ತದೆ. ಆದರೆ ಕನ್ನಡಕ್ಕಿಲ್ಲ. ಜುಲೈ ಅಂತ್ಯ ವೇಳೆಗೆ ನಿಯೋಗದ ಜತೆ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡುತ್ತೇವೆ' ಎಂದು ಹೇಳಿದರು.

ಕನ್ನಡ ಧ್ವಜಕ್ಕೆ ಒತ್ತಾಯ ಇದೇ ಮೊದಲೇನಲ್ಲ..

ಇನ್ನು ಕನ್ನಡ ಧ್ವಜಕ್ಕೆ ಕರ್ನಾಟಕ ಸರ್ಕಾರದ ಒತ್ತಾಯ ಇದೇ ಮೊದಲೇನಲ್ಲ.. ಈ ಹಿಂದೆ ಅಂದರೆ 2017 ರಲ್ಲೇ ಬಾವುಟ ಅಧಿಕೃತ ಕೋರಿ ಕೇಂದ್ರಕ್ಕೆ ಅಂದಿನ ಸಿದ್ದರಾಮಯ್ಯ (Siddaramaiah) ಸರ್ಕಾರ ಮನವಿ ಸಲ್ಲಿಸಿತ್ತು. ಇದೀಗ ಮತ್ತೊಮ್ಮೆ ಪತ್ರ ಬರೆಯುವ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!