ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ 
ರಾಜ್ಯ

ಸಂಪೂರ್ಣ ತುಂಬಿದ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಕಳೆದ ಜೂನ್ ಮೊದಲ ವಾರದಲ್ಲೇ ತುಂಬಿತ್ತು. ಅಣೆಕಟ್ಟೆಯ ಗರಿಷ್ಠ ಮಟ್ಟ 2,284 ಅಡಿ ಇದೆ.

ಮಂಡ್ಯ: ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು.

ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಕಳೆದ ಜೂನ್ ಮೊದಲ ವಾರದಲ್ಲೇ ತುಂಬಿತ್ತು. ಅಣೆಕಟ್ಟೆಯ ಗರಿಷ್ಠ ಮಟ್ಟ 2,284 ಅಡಿ ಇದ್ದು, ಇಂದಿನ ಮಟ್ಟ 2,283.33 ಅಡಿ ಇತ್ತು. 15 ಸಾವಿರ ಕ್ಯೂಸೆಕ್ ಒಳಹರಿವಿತ್ತು. ಅಣೆಕಟ್ಟೆಯ ಕಾವಲು ಗೋಪುರದ ಬಳಿ ಬೆಳಿಗ್ಗೆ 11.15ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿ, 32.25 ಕೋಟಿ ರು. ವೆಚ್ಚದ ಅಣೆಕಟ್ಟೆ ಪುನಶ್ಚೇತನ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.

ಕಪಿಲಾ ನದಿಯು ಕಾವೇರಿಯ ಪ್ರಮುಖ ಉಪನದಿಯಾಗಿದ್ದು, 1.13 ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ಒದಗಿಸುತ್ತದೆ. ಪ್ರತಿ ವರ್ಷದಂತೆ ಜಲಾಶಯ ತುಂಬಿದಾಗ ಬಾಗಿನ ಅರ್ಪಿಸಲಾಗಿದ್ದು, ರೈತರಿಗೆ ಒಳ್ಳೆಯದಾಗಲೆಂದು ಕಪಿಲಾ ಮಾತೆಗೆ ಪ್ರಾರ್ಥಿಸಲಾಗಿದೆ‌. ಜಲಾಶಯದ ಎದುರು ಬೃಂದಾವನ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದರೆ, ಸಮಾನಾಂತರ ಜಲಾಶಯ ನಿರ್ಮಿಸಲಾಗುವುದು. ಗೋವಾ ಹಾಗೂ ಕೇಂದ್ರದಲ್ಲಿ ಬಿಜೆಪಿಯವರದ್ದೇ ಸರ್ಕಾರವಿದೆ. ಮಹಾದಾಯಿ ಮತ್ತು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದ ನಿರ್ಬಂಧ ಲೆಕ್ಕಿಸದೇ ಭಾರತ ರಷ್ಯಾ ತೈಲ ಆಮದು ಮುಂದುವರಿಸಲಿದೆ: ಸುಜಾತಾ ಶರ್ಮಾ

ಭಾರತದ ಮೊದಲ ಬುಲೆಟ್ ರೈಲಿನ 'ಫಸ್ಟ್ ಲುಕ್' ರಿಲೀಸ್‌: ಸಂಚಾರ ಯಾವಾಗಿಂದ ಆರಂಭ?

'ಅಮ್ಮ ಕ್ಯಾಂಟೀನ್‌' ಆಧುನೀಕರಿಸಲು ತಮಿಳುನಾಡು ಸಿಎಂ ವಿಜಯ್ ಆದೇಶ; ಅಚ್ಚರಿ ಮೂಡಿಸಿದ ದಳಪತಿ ನಡೆ

ಮ್ಯಾಜಿಕ್ ವ್ಯಾನ್-ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು; ಪರಿಹಾರ ಘೋಷಿಸಿದ ಪ್ರಧಾನಿ

Bengaluru Rains: ವರುಣಾರ್ಭಟಕ್ಕೆ ನದಿಯಂತಾದ ರಸ್ತೆಗಳು; 5 ದಿನ ಮಳೆ ಸಾಧ್ಯತೆ, ತಾಪಮಾನ ಗಣನೀಯ ಇಳಿಕೆ: ಹವಾಮಾನ ಇಲಾಖೆ

SCROLL FOR NEXT