ಬೀದಿನಾಯಿಗಳ ಸಾಂದರ್ಭಿಕ ಚಿತ್ರ 
ರಾಜ್ಯ

Karnataka: ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ಸುಮಾರು 2.3 ಲಕ್ಷ ನಾಯಿ ಕಡಿತ ಪ್ರಕರಣ ದಾಖಲು; ರೇಬಿಸ್ ನಿಂದ 19 ಮಂದಿ ಸಾವು!

ರಾಜ್ಯ ಆರೋಗ್ಯ ಇಲಾಖೆಯ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ (IDSP)ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈ ವರ್ಷದ ಜನವರಿ 1 ಮತ್ತು ಜೂನ್ 30ರ ನಡುವೆ 2,31, 091 ನಾಯಿ ಕಡಿತ ಪ್ರಕರಣಗಳು ಹಾಗೂ 19 ರೇಬಿಸ್ ಸಾವಿನ ಪ್ರಕರಣ ದಾಖಲಾಗಿದೆ

ಬೆಂಗಳೂರು: ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 2.3 ಲಕ್ಷ ನಾಯಿ ಕಡಿತ ಪ್ರಕರಣಗಳು ದಾಖಲಾಗಿದ್ದು, ರೇಬಿಸ್ ನಿಂದ 19 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಈ ಸಂಬಂಧ ಅಧಿಕೃತ ಮಾಹಿತಿ ಬಿಡುಗಡೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗಿದೆ. 2024ರಲ್ಲಿ 3.6 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 42 ರೇಬಿಸ್ ನಿಂದ ಸಾವಿನ ಪ್ರಕರಣ ವರದಿಯಾಗಿತ್ತು.

ರಾಜ್ಯ ಆರೋಗ್ಯ ಇಲಾಖೆಯ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ (IDSP)ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈ ವರ್ಷದ ಜನವರಿ 1 ಮತ್ತು ಜೂನ್ 30ರ ನಡುವೆ 2,31, 091 ನಾಯಿ ಕಡಿತ ಪ್ರಕರಣಗಳು ಹಾಗೂ 19 ರೇಬಿಸ್ ಸಾವಿನ ಪ್ರಕರಣ ದಾಖಲಾಗಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ 1,69,672 ನಾಯಿ ಕಡಿತ ಪ್ರಕರಣಗಳು, 18 ರೇಬಿಸ್ ಸಾವು ಪ್ರಕರಣ ದಾಖಲಾಗಿತ್ತು. 2023ರ ಇದೇ ಅವಧಿಗೆ ಹೋಲಿಸಿದರೆ ನಾಯಿ ಕಡಿತ ಪ್ರಕರಣಗಳು ಶೇ. 36.20 ರಷ್ಟು ಹೆಚ್ಚಾಗಿರುವುದು ಮಾಹಿತಿಯಿಂದ ತಿಳಿದುಬರುತ್ತದೆ.

ಇದೇ ವಾರ ಹುಬ್ಬಳ್ಳಿಯಲ್ಲಿ ಬೀದಿನಾಯಿಗಳು ಮೂರು ವರ್ಷದ ಬಾಲಕಿ ಮೇಲೆ ದಾಳಿ ಮಾಡಿ ಎಳೆದಾಡಿದ್ದ ವಿಡಿಯೋ ವೈರಲ್ ಆಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ನಿಖರ ವರದಿಯಿಂದಾಗಿ ಈಗ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬರುತ್ತಿವೆ. ಹಿಂದೆಯೂ ಕೂಡಾ ಇದೇ ರೀತಿಯ ಘಟನೆಗಳು ನಡೆದಿತ್ತು. ಆದರೆ ನಿಖರವಾಗಿ ವರದಿಯಾಗುತ್ತಿರಲಿಲ್ಲ. ಈಗ ಉತ್ತಮವಾಗಿ ವರದಿಯಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಹೇಳಿದ್ದಾರೆ.

ಇಂತಹ ಪ್ರಕರಣಗಳ ನಿಯಂತ್ರಣಕ್ಕೆ ಇಲಾಖೆ ಸಾಕಷ್ಟು ಪ್ರಯತ್ನ ಮಾಡುತ್ತಿದ್ದು, ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ನಾಯಿ ಕಡಿತ ಸಂತ್ರಸ್ತರಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂದು ಡಾಕ್ಟರ್ ಗೆ ತರಬೇತಿ ನೀಡಲಾಗುತ್ತಿದೆ. ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹರ್ಷ ಗುಪ್ತಾ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT