ಸಾಂದರ್ಭಿಕ ಚಿತ್ರ 
ರಾಜ್ಯ

ರೌಡಿಶೀಟರ್ ಬಿಕ್ಲ ಶಿವ ಕೊಲೆ ಪ್ರಕರಣ: ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 7ಕ್ಕೆ ಏರಿಕೆ

ಶಂಕಿತರನ್ನು ಅರುಣ್ ಅಲಿಯಾಸ್ ತೇಮು ಮತ್ತು ನವೀನ್ ಎಂದು ಗುರುತಿಸಲಾಗಿದ್ದು, ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ರೌಡಿಶೀಟರ್ ಶಿವ ಪ್ರಕಾಶ್ ಅಲಿಯಾಸ್ ಬಿಕ್ಲ ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಈ ಮೂಲಕ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ ಈಗ ಏಳಕ್ಕೆ ಏರಿದೆ.

ಶಂಕಿತರನ್ನು ಅರುಣ್ ಅಲಿಯಾಸ್ ತೇಮು ಮತ್ತು ನವೀನ್ ಎಂದು ಗುರುತಿಸಲಾಗಿದ್ದು, ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

'ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನಂತರ ನಾವು 14 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದಿದ್ದೇವೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತೊಬ್ಬ ಶಂಕಿತ ಆರ್‌ಡಿ ಅನಿಲ್ ಎಂಬಾತನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದ್ದು, ಅಪರಾಧ ಕೃತ್ಯದಲ್ಲಿ ಬಳಸಲಾದ ವಾಹನವನ್ನು ಅವನೇ ಒದಗಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜುಲೈ 19 ರಂದು ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್ ಅವರನ್ನು ಮೂರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಯಿತು. ವಿಚಾರಣೆಗೆ ಹಾಜರಾಗುವಂತೆ ಕರ್ನಾಟಕ ಹೈಕೋರ್ಟ್‌ನ ನಿರ್ದೇಶನ ನೀಡಿತ್ತು. ಜುಲೈ 23 ರಂದು ಅವರನ್ನು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಪೊಲೀಸರ ಪ್ರಕಾರ, ಜುಲೈ 15ರ ರಾತ್ರಿ ಭಾರತಿ ನಗರದಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು (40) ಅವರನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು.

ಪ್ರಕರಣದಲ್ಲಿ ಈಗಾಗಲೇ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಫ್ರೆಡ್ರಿಕ್ ಎಂಬುವವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!