ಮಳೆ ಹಿನ್ನೆಲೆಯಲ್ಲಿ ರೇನ್ಕೋಟ್, ಛತ್ರಿಗಳ ಮೊರೆ ಹೋದ ಜನತೆ. 
ರಾಜ್ಯ

Bengaluru Rains: ಬೆಂಗಳೂರಿನಲ್ಲಿ 11 ಮಿ.ಮೀ ಮಳೆ, ಹಲವೆಡೆ ಸಂಚಾರ ಅಸ್ತವ್ಯಸ್ತ..!

ಸಂಜೆ ವೇಳೆ ಸುರಿದ ಭಾರೀ ಮಳೆಯಿಂದಾಗಿ, ಹಲವಾರು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ತೀವ್ರ ತೊಂದರೆಯಾಯಿತು, ಇದರಿಂದಾಗಿ ವಾಹನಗಳು ನಿಧಾನವಾಗಿ ಚಲಿಸಿದವು.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ 5.30 ರವರೆಗೆ 11 ಮಿ.ಮೀ ಮಳೆಯಾಗಿದ್ದು, ವರುಣನ ಆರ್ಭಟದಿಂದ ಹಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 4.2 ಮಿ.ಮೀ ಮಳೆಯಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮಾಹಿತಿಗಳ ಪ್ರಕಾರ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ದಲ್ಲಿ 19.8 ಮಿ.ಮೀ ಮಳೆ ದಾಖಲಾಗಿದ್ದು, ಜಕ್ಕೂರಿನಲ್ಲಿ 17 ಮಿ.ಮೀ, ವಿದ್ಯಾರಣ್ಯಪುರದಲ್ಲಿ 15 ಮಿ.ಮೀ, ಬಾಣಸವಾಡಿಯಲ್ಲಿ 11.50 ಮಿ.ಮೀ, ಎಚ್‌ಎಎಲ್ ಹಳೆಯ ವಿಮಾನ ನಿಲ್ದಾಣದಲ್ಲಿ 11 ಮಿ.ಮೀ ಮತ್ತು ಹೊರಮಾವು 11 ಮಿ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ.

ಸಂಜೆ ವೇಳೆ ಸುರಿದ ಭಾರೀ ಮಳೆಯಿಂದಾಗಿ, ಹಲವಾರು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ತೀವ್ರ ತೊಂದರೆಯಾಯಿತು, ಇದರಿಂದಾಗಿ ವಾಹನಗಳು ನಿಧಾನವಾಗಿ ಚಲಿಸಿದವು. ಸಂಚಾರ ದಟ್ಟಣೆಯಿಂದಾಗಿ ನಗರಾದ್ಯಂತ ವಿದ್ಯಾರ್ಥಿಗಳು, ಮನೆಗೆ ಹೋಗುವವರು ತೀವ್ರ ಸಮಸ್ಯೆ ಎದುರಿಸಿದರು.

ಹಲವು ಅಂಡರ್‌ಪಾಸ್‌ಗಳಲ್ಲಿ ನೀರು ನಿಂತ ಪರಣಾಮ ವಾಹನ ಸಂಚಾರ ನಿಧಾನವಾಯಿತು. ತೀವ್ರ ಸಂಚಾರ ಅಡಚಣೆ ಉಂಟಾದ ಪ್ರದೇಶಗಳಿಗೆ ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಹಲವಾರು ಸಲಹೆಗಳನ್ನು ನೀಡಿದರು.

ಸಿಲ್ಕ್ ಬೋರ್ಡ್ ಜಂಕ್ಷನ್, ಗುಂಜೂರು ರಸ್ತೆ, ವರ್ತೂರು, ಮಾರತಹಳ್ಳಿ ಸೇತುವೆ, ಬೆಳ್ಳಂದೂರು, ಐಟಿಪಿಎಲ್ ಮುಖ್ಯ ರಸ್ತೆ, ಆಡುಗೋಡಿ ಜಂಕ್ಷನ್, ರೂಪೇನ ಅಗ್ರಹಾರ, ಬೊಮ್ಮನಹಳ್ಳಿ, ಪಾಣತ್ತೂರು ಜಂಕ್ಷನ್, ಹೆಣ್ಣೂರಿನ ಕೆಇಬಿ ಜಂಕ್ಷನ್, ಕೊತ್ತನೂರು ಮುಖ್ಯ ರಸ್ತೆ ಮತ್ತು ಡೈರಿ ವೃತ್ತದ ಸಾಗರ್ ಮೆಟ್ರೋ ನಿಲ್ದಾಣದ ಬಳಿ ತೀವ್ರ ಸಂಚಾರ ದಟ್ಟಣೆ ಸಮಸ್ಯೆ ಕಂಡು ಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

'ಜೀವ ಬಾಯಿಗೆ ಬಂದಿತ್ತು': ಆಗಸದಲ್ಲೇ ಗಿರಕಿ ಹೊಡೆದ ಡಿಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ, ಕೆಲಕಾಲ ಆತಂಕ! ಆಗಿದ್ದೇನು?

SCROLL FOR NEXT