ಗೋವಿಂದ ಪುರ ಪೊಲೀಸ್ ಠಾಣೆ 
ರಾಜ್ಯ

ಆರೋಪಿ ಬಚಾವ್ ಮಾಡಲು ಲಂಚ: ಗೋವಿಂದಪುರ ಮಹಿಳಾ PSI ಲೋಕಾಯುಕ್ತ ಬಲೆಗೆ!

ಗೋವಿಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಲಂಚ ಪಡೆದ ಆರೋಪದ ಮೇರೆಗೆ ಬಂಧಿಸಿದ್ದಾರೆ.

ಬೆಂಗಳೂರು: ಪ್ರಕರಣವೊಂದರ ಆರೋಪಿಯನ್ನು ಬಚಾವ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನ ಗೋವಿಂದ ಪುರ ಮಹಿಳಾ ಪಿಎಎಸ್ ಅನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಹೌದು.. ಗೋವಿಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಲಂಚ ಪಡೆದ ಆರೋಪದ ಮೇರೆಗೆ ಬಂಧಿಸಿದ್ದಾರೆ.

ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಸಲು ವ್ಯಕ್ತಿಯೊಬ್ಬರಿಂದ 1.25 ಲಕ್ಷ ರು. ಲಂಚ ಸ್ವೀಕರಿಸುವಾಗ ಮಹಿಳಾ ಪಿಎಸ್‌ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಎಚ್‌ಬಿಆರ್ ಲೇಔಟ್ ನಿವಾಸಿ ಮೊಹಮ್ಮದ್ ಯೂನಸ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಸೋಮವಾರ ಲಂಚ ಸ್ವೀಕರಿಸುವಾಗ ಪಿಎಸ್‌ಐಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಪ್ರಕರಣ?

ಪೊಲೀಸ್ ಮೂಲಗಳ ಪ್ರಕಾರ ದೂರುದಾರ ಮೊಹಮ್ಮದ್ ಯೂನಸ್ ಯುವತಿಯೊಬ್ಬಳನ್ನು ಪ್ರೀತಿಸಿದ್ದು, ಇಬ್ಬರು 4 ವರ್ಷದಿಂದ ಒಂದೇಮನೆಯಲ್ಲಿ ಸಹಜೀವನ ನಡೆಸುತ್ತಿದ್ದರು. ಕೆಲ ದಿನಗಳ ಬಳಿಕ ಮೊಹಮ್ಮದ್‌ಗೆ ಬೇರೊಂದು ಯುವತಿ ಜತೆಗೆ ಈ ಮೊದಲೇ ಮದುವೆಯಾಗಿರುವ ವಿಚಾರ ಯುವತಿಗೆ ಗೊತ್ತಾಗಿದೆ. ಈ ಬಗ್ಗೆ ಪ್ರಶ್ನಿಸಿದಾಗ ಗಲಾಟೆ ಮಾಡಿ ಯುವತಿಗೆ ಹಲ್ಲೆ ಮಾಡಿದ್ದ. ಈ ಸಂಬಂಧ ಯುವತಿ ಮೊಹಮ್ಮದ್ ಯೂನಸ್ ವಿರುದ್ಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ

ಈ ನಡುವೆ ಮೇ 5ರಂದು ಮೊಹಮ್ಮದ್, ಯುವತಿಗೆ ಕರೆ ಮಾಡಿ ಮಾತನಾಡುವುದಿದೆ ಬಾ ಎಂದು ಎಚ್ ಬಿಆ‌‌ರ್ ಲೇಔಟ್‌ನ ಮನೆಗೆ ಕರೆಸಿಕೊಂಡಿದ್ದಾನೆ. ಈ ವೇಳೆ ತನ್ನ ವಿರುದ್ಧ ಕೆ.ಜಿ.ಹಳ್ಳಿ ಠಾಣೆಗೆ ನೀಡಿರುವ ದೂರನ್ನು ಹಿಂಪಡೆಯುವಂತೆ ಹೇಳಿದ್ದಾನೆ. ಇದಕ್ಕೆ ಆ ಯುವತಿ ನಿರಾಕರಿಸಿದಾಗ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದ. ಬಳಿಕ ಆತನೇ ಸ್ಥಳೀಯ ಸಹಾಯದಿಂದ ಯುವತಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು ಅಪಘಾತವಾಗಿದೆ ಎಂದು ಸುಳ್ಳು ಹೇಳಿ ಚಿಕಿತ್ಸೆ ಕೊಡಿಸಿದ್ದ. ಚೇತರಿಸಿಕೊಂಡ ಬಳಿಕ ಆ ಯುವತಿ

ಗೋವಿಂದಪುರ ಪೊಲೀಸ್ ಠಾಣೆಗೆ ಮೊಹಮ್ಮದ್ ಯೂನಿಸ್ ವಿರುದ್ಧ ದೂರು ನೀಡಿದ್ದಳು.

ಬಿ ರಿಪೋರ್ಟ್ ಸಲ್ಲಿಸಲು ಲಂಚ

ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಯೂನಸ್ ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಸಲು ಮಹಿಳಾ ಪಿಎಸ್‌ಐ ಸಾವಿತ್ರಿ ಬಾಯಿ 1.25 ಲಕ್ಷ ಲಂಚಕ್ಕೆ ಬೇಡಿಕೆ ಇರಿಸಿದ್ದರು. ಆದರೆ ಮಹಮದ್ ಲಂಚದ ಹಣವನ್ನು ಪಾವತಿಸಲು ಸಾಧ್ಯವಾಗದೆ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದ.

ಬಳಿಕ ಆತನ ಮೂಲಕವೇ ಲೋಕಾಯುಕ್ತ ಪೊಲೀಸರು ಲಂಚ ಪ್ರಕರಣ ಬೇದಿಸಲು ಜಾಲ ಬೀಸಿದ್ದರು. ಅದರಂತೆ ಪೊಲೀಸರು ಸೋಮವಾರ ಲಂಚ ಪಡೆಯುತ್ತಿದ್ದಾಗ ಬಲೆ ಬೀಸಿ ಆರೋಪಿ ಮಹಿಳಾ ಅಧಿಕಾರಿಯನ್ನು ಬಂಧಿಸಿದ್ದಾರೆ. ಪ್ರಸ್ತುತ ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್