ರೋಷನ್ ಸಲ್ಡಾನಾ, ಬಂಗಲೆ, ರಹಸ್ಯ ಕೊಠಡಿ, ಐಷಾರಾಮಿ ಬಾರ್ 
ರಾಜ್ಯ

ಮಂಗಳೂರಿನಲ್ಲಿ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಮಂಗಳೂರು ನಗರ ಪೊಲೀಸರು ಹೆಚ್ಚಿನ ತನಿಖೆಗೆ ಸಲ್ಡಾನಾನನ್ನು ತನ್ನ ವಶಕ್ಕೆ ನೀಡುವಂತೆ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಜುಲೈ 23 ರಂದು ವಿಚಾರಣೆ ನಡೆಯಲಿದೆ.

ಮಂಗಳೂರು: ತನ್ನ ಐಷಾರಾಮಿ ಬಂಗಲೆ ಮೂಲಕ ತಾನೊಬ್ಬ ಉದ್ಯಮಿಯೆಂದು ಬಿಂಬಿಸಿಕೊಂಡು ನೂರಾರು ಕೋಟಿ ರೂ. ವಂಚಿಸಿದ ರೋಷನ್ ಸಲ್ಡಾನಾ(43) ಬಹುಕೋಟಿ ವಂಚನೆ ಪ್ರಕರಣವನ್ನು ಮಂಗಳವಾರ ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆ(ಸಿಐಡಿ)ಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಆರೋಪಿ ಮಂಗಳೂರಿನ ಕಂಕನಾಡಿ ಬಳಿಯ ಬೊಳ್ಳಗುಡ್ಡ ಬಜಾಲ್‌ನ 43 ವರ್ಷದ ವಂಚಕ ರೋಷನ್ ಸಲ್ಡಾನಾ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಡಿಮೆ ಬಡ್ಡಿದರದಲ್ಲಿ ನೂರಾರು ಕೋಟಿ ರೂ. ಸಾಲ ನೀಡುವುದಾಗಿ ಭರವಸೆ ನೀಡಿ, ಅವರಿಂದ ಕೋಟಿಗಟ್ಟಲೆ ಹಣ ಸಂಗ್ರಹಿಸಿ, ವಂಚನೆ ಮಾಡಿ ನಾಪತ್ತೆಯಾಗಿದ್ದ ವಂಚಕ ರೋಷನ್ ಸಲ್ಡಾನಾನನ್ನು ಕಳೆಗ ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ಉದ್ಯಮಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಸಲ್ಡಾನಾ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, 10 ಕೋಟಿ ರೂ.ಗಳಿಗೂ ಹೆಚ್ಚು ವಂಚಿಸಲಾಗಿದೆ ಎಂದು ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣವು ನಕಲಿ ದಾಖಲೆಗಳ ಬಳಕೆ, ಶೆಲ್ ಕಂಪನಿಗಳು ಮತ್ತು ಹಣಕಾಸಿನ ಕುಶಲತೆಯ ಅತ್ಯಾಧುನಿಕ ವಿಧಾನಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಕಾನೂನು ನಿಬಂಧನೆಗಳ ಪ್ರಕಾರ, 10 ಕೋಟಿ ರೂ.ಗಿಂತ ಹೆಚ್ಚಿನ ವಂಚನೆ ಪ್ರಕರಣಗಳು ಸಿಐಡಿ ತನಿಖೆಗೆ ಅರ್ಹವಾಗಿವೆ.

ಈ ಹಿಂದೆ ಔಪಚಾರಿಕ ವಿನಂತಿಯನ್ನು ಸಲ್ಲಿಸಲಾಗಿತ್ತು ಮತ್ತು ಈಗ ಸಿಐಡಿ ತನಿಖೆ ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿದೆ.

ಸಲ್ಡಾನಾ ಗೋವಾ, ಬೆಂಗಳೂರು. ಪುಣೆ, ವಿಜಯಪುರ, ತುಮಕೂರು, ಕಲ್ಕತ್ತಾ, ಸಾಂಗ್ಲಿ, ಲಕ್ನೋ ಮತ್ತು ಬಾಗಲಕೋಟೆ ಸೇರಿದಂತೆ ಹಲವು ಪ್ರದೇಶಗಳ ಜನರನ್ನು ವಂಚಿಸಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್