ಪುನೀತ್ ಕೆರೆಹಳ್ಳಿ 
ರಾಜ್ಯ

ಗೋಮಾಂಸ ಸಾಗಣೆ ಮಾಡುತ್ತಿದ್ದ ವಾಹನ ಅಡ್ಡಗಟ್ಟಿ ಹಲ್ಲೆ: ಪುನೀತ್ ಕೆರೆಹಳ್ಳಿ ಬಂಧನ

ಭಾನುವಾರ ಮುಂಜಾನೆ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ಗೋಮಾಂಸ ಸಾಗಣೆ ಮಾಡುತ್ತಿದ್ದ ವಾಹನವನ್ನು ಅಡ್ಡಗಟ್ಟಿ, ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಾಗಲಗುಂಟೆ ಪೊಲೀಸರು ಗೋರಕ್ಷಕ ಮತ್ತು ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಅಲ್ಲಾಬಕ್ಷ್ ಎಂಬುವರು ನೀಡಿದ ದೂರಿನನ್ವಯ ಬಾಗಲಗುಂಟೆ ಠಾಣಾ ಪೊಲೀಸರು ಬಿಎನ್‍ಎಸ್ ಸೆಕ್ಷನ್ 115(2), 118(1), 126(2), 352, 3(5) ಅಡಿಯಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಭಾನುವಾರ ಮುಂಜಾನೆ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಜೂನ್ 19 ರ ಮಧ್ಯರಾತ್ರಿ, ನೆಲಮಂಗಲದಿಂದ ಶಿವಾಜಿನಗರಕ್ಕೆ ಗೋಮಾಂಸ ಸಾಗಿಸುತ್ತಿದ್ದಾಗ ಅಲ್ಲಾ ಬಕ್ಷ್ (30) ಎಂಬುವವರ ವಾಹನವನ್ನು ಬಾಗಲಗುಂಟೆ ಬಳಿಯ ತುಮಕೂರು-ಬೆಂಗಳೂರು ಫ್ಲೈಓವರ್‌ನಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಅವರ ಸಹಚರರು ತಡೆದಿದ್ದಾರೆ.

ಪುನೀತ್ ಕೆರೆಹಳ್ಳಿ ಮತ್ತು ಅವರ ಸಹಚರರು ಚಾಲಕನ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕರ್ನಾಟಕ ಗೋಹತ್ಯೆ ತಡೆ ಮತ್ತು ದನ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದೆ.

ಇದೇ ವೇಳೆ ಹಲ್ಲೆ ನಡೆಸಿದ್ದರ ಕುರಿತು ಚಾಲಕ ದೂರು ನೀಡಿರುವ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯವರನ್ನೂ ಪೊಲೀಸರು ಬಂಧನಕ್ಕೊಳಪಡಿಸಿ, ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ