ಪುನೀತ್ ಕೆರೆಹಳ್ಳಿ 
ರಾಜ್ಯ

ಗೋಮಾಂಸ ಸಾಗಣೆ ಮಾಡುತ್ತಿದ್ದ ವಾಹನ ಅಡ್ಡಗಟ್ಟಿ ಹಲ್ಲೆ: ಪುನೀತ್ ಕೆರೆಹಳ್ಳಿ ಬಂಧನ

ಭಾನುವಾರ ಮುಂಜಾನೆ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ಗೋಮಾಂಸ ಸಾಗಣೆ ಮಾಡುತ್ತಿದ್ದ ವಾಹನವನ್ನು ಅಡ್ಡಗಟ್ಟಿ, ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಾಗಲಗುಂಟೆ ಪೊಲೀಸರು ಗೋರಕ್ಷಕ ಮತ್ತು ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಅಲ್ಲಾಬಕ್ಷ್ ಎಂಬುವರು ನೀಡಿದ ದೂರಿನನ್ವಯ ಬಾಗಲಗುಂಟೆ ಠಾಣಾ ಪೊಲೀಸರು ಬಿಎನ್‍ಎಸ್ ಸೆಕ್ಷನ್ 115(2), 118(1), 126(2), 352, 3(5) ಅಡಿಯಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಭಾನುವಾರ ಮುಂಜಾನೆ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಜೂನ್ 19 ರ ಮಧ್ಯರಾತ್ರಿ, ನೆಲಮಂಗಲದಿಂದ ಶಿವಾಜಿನಗರಕ್ಕೆ ಗೋಮಾಂಸ ಸಾಗಿಸುತ್ತಿದ್ದಾಗ ಅಲ್ಲಾ ಬಕ್ಷ್ (30) ಎಂಬುವವರ ವಾಹನವನ್ನು ಬಾಗಲಗುಂಟೆ ಬಳಿಯ ತುಮಕೂರು-ಬೆಂಗಳೂರು ಫ್ಲೈಓವರ್‌ನಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಅವರ ಸಹಚರರು ತಡೆದಿದ್ದಾರೆ.

ಪುನೀತ್ ಕೆರೆಹಳ್ಳಿ ಮತ್ತು ಅವರ ಸಹಚರರು ಚಾಲಕನ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕರ್ನಾಟಕ ಗೋಹತ್ಯೆ ತಡೆ ಮತ್ತು ದನ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದೆ.

ಇದೇ ವೇಳೆ ಹಲ್ಲೆ ನಡೆಸಿದ್ದರ ಕುರಿತು ಚಾಲಕ ದೂರು ನೀಡಿರುವ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯವರನ್ನೂ ಪೊಲೀಸರು ಬಂಧನಕ್ಕೊಳಪಡಿಸಿ, ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT