ಪೊಲೀಸ್ (ಸಾಂಕೇತಿಕ ಚಿತ್ರ) online desk
ರಾಜ್ಯ

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ

ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ.

ಮಂಗಳೂರು: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ)ದ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ.

ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಎಸ್ಐಟಿ ರಚಿಸಿರುವ ಸರ್ಕಾರ, ಸಹಾಯವಾಣಿಯನ್ನು ಆರಂಭಿಸಬೇಕೆಂದು ಮನವಿ ಮಾಡುತ್ತಿದ್ದೇನೆಂದು ಹೇಳಿದ್ದಾರೆ.

ಇದಲ್ಲದೆ, ಮುಂದೆ ಬರುವ ದೂರುಗಳನ್ನು ಸ್ವೀಕರಿಸಲು ಎಸ್ಐಟಿ ಕಚೇರಿಯೇ ಪೊಲೀಸ್ ಠಾಣೆಯೆಂದು ತಿಳಿಸಬೇಕು. ಇಲ್ಲದಿದ್ದರೆ, "ಎಸ್‌ಐಟಿ 'ಪೊಲೀಸ್ ಠಾಣೆ'ಯಾಗಿ ಕಾರ್ಯನಿರ್ವಹಿಸಿದರೂ 'ಪೊಲೀಸ್ ಠಾಣೆ' ಎಂದು ಅಧಿಸೂಚನೆಗೊಳ್ಳದ ಹಿನ್ನೆಲೆಯಲ್ಲಿ ಆರೋಪಿಗಳು ಅದನ್ನು ದುರುಪಯೋಗಪಡಿಸಿಕೊಂಡು ನ್ಯಾಯಾಲಯಗಳಿಂದ ತಡೆಯಾಜ್ಞೆ ಪಡೆಯುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT