ಬಾಗಲಕೋಟೆ: ಚಿಕ್ಕಪ್ಪನೇ 3 ವರ್ಷದ ಮಗುವಿನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ನಡೆದಿದೆ.
ಮಾರುತಿ ವಾಲಿಕರ್ ಎಂಬುವವರ ಮಗುವನ್ನು ಹತ್ಯೆ ಮಾಡಲಾಗಿದೆ. ಮಾರುತಿ ಸಹೋದರ ಭೀಮಪ್ಪ ವಾಲೀಕಾರನಿಂದಲೇ ಈ ಒಂದು ಕೃತ್ಯ ನಡೆದಿದೆ.
ಮಗು ಅಂಗನವಾಡಿಗೆ ತೆರಳಿತ್ತು. ಈ ವೇಳೆ, ಮಾರುತಿಯ ಸಹೋದರ ಭೀಮಪ್ಪ ವಾಲಿಕಾರ ಅಲ್ಲಿಗೆ ತೆರಳಿ, ಅಂಗನವಾಡಿಯ ಹಿಂಭಾಗದಲ್ಲಿ ಮಗುವಿನ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಅಮೀನಗಡ ಠಾಣೆಯ ಪೊಲೀಸರು ಭೀಮಪ್ಪನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಈ ಭೀಕರ ಕೊಲೆಗೆ ಕಾರಣವೇನೆಂದು ಅಧಿಕೃತ ಮಾಹಿತಿ ಲಭ್ಯವಿಲ್ಲದಿದ್ದರೂ, ಆರೋಪಿಯು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.