ವೀರಸ್ವಾಮಿ ರೆಡ್ಡಿ-ಪ್ರಶಾಂತ್ ರೆಡ್ಡಿ 
ರಾಜ್ಯ

ಆಂಧ್ರಪ್ರದೇಶ: ಬೆಂಗಳೂರಿನ BJP ಮುಖಂಡರು ಹಾಗೂ ಉದ್ಯಮಿಗಳಾದ ತಂದೆ-ಮಗನ ಕತ್ತು ಸೀಳಿ ಬರ್ಬರ ಹತ್ಯೆ

ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದು ಪ್ರಶಾಂತ್ ರೆಡ್ಡಿ ಮಹದೇವಪುರ ಬಿಜೆಪಿಯ ಯುವ ಮೋರ್ಚದ ಅಧ್ಯಕ್ಷರಾಗಿದ್ದಾರೆ.

ಬೆಂಗಳೂರು: ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ (BJP) ಮುಖಂಡರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದ ತಂದೆ ವೀರಸ್ವಾಮಿರೆಡ್ಡಿ ಹಾಗೂ ಅವರ ಪುತ್ರ ಪ್ರಶಾಂತ್ ರೆಡ್ಡಿಯನ್ನು ಅಪಹರಿಸಿದ ದುಷ್ಕರ್ಮಿಗಳು ಇಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ತಂದೆ ಮಕ್ಕಳು ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದರು. ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದು ಪ್ರಶಾಂತ್ ರೆಡ್ಡಿ ಮಹದೇವಪುರ ಬಿಜೆಪಿಯ ಯುವ ಮೋರ್ಚದ ಅಧ್ಯಕ್ಷರಾಗಿದ್ದಾರೆ. ಬೆಂಗಳೂರಿನಲ್ಲಿ ಪ್ರಶಾಂತ್ ಮತ್ತು ವೀರಸ್ವಾಮಿರೆಡ್ಡಿ ಇಬ್ಬರೂ ಮಾರ್ವಲ್ ಬಿಲ್ಡರ್ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಮೇಲೆ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.

ಇದಕ್ಕೆ ಪ್ರತಿಯಾಗಿ ಆಂಧ್ರದಲ್ಲಿ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಇವರಿಬ್ಬರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ನಿನ್ನೆ ಆಂಧ್ರಕ್ಕೆ ತೆರಳಿದ್ದು ಇಂದು ಮಧ್ಯಾಹ್ನ 12 ಗಂಟೆಗೆ ಕೋರ್ಟ್ ಮುಂದೆ ಹಾಜರಾಗಿದ್ದರು. ಈ ವೇಳೆ ಮಾಧವರೆಡ್ಡಿ ಮತ್ತು ಅನಿಲ್ ರೆಡ್ಡಿ ರಾಜಿ ಮಾಡಿಕೊಳ್ಳುವುದಾಗಿ ವೀರಸ್ವಾಮಿ ಮತ್ತು ಪ್ರಶಾಂತ್ ರೆಡ್ಡಿಯನ್ನು ಕರೆಸಿ ತಮ್ಮ ಸ್ಕಾರ್ಪಿಯೋ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ್ದಾರೆ. ನಂತರ ಅವರಿಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಹೆದ್ದಾರಿಯಲ್ಲೇ ಎಸೆದು ಹೋಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT