ಸಾಂದರ್ಭಿಕ ಚಿತ್ರ 
ರಾಜ್ಯ

ಗಯಾನಾದಲ್ಲಿ ಪತಿ ಹೃದಯಾಘಾತದಿಂದ ಸಾವು: ಮೃತದೇಹವನ್ನು ತಾಯ್ನಾಡಿಗೆ ತರಲು ಪತ್ನಿಯ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ!

ಮೃತಪಟ್ಟ ಪಿ.ಬಿ.ಗಿರೀಶ್ ಕೊಡಗಿನ ಮದೆನಾಡು ಗ್ರಾಮದ ನಿವಾಸಿ. ಅವರು ದಕ್ಷಿಣ ಅಮೆರಿಕದ ಗಯಾನಾದಲ್ಲಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.

ಬೆಂಗಳೂರು: ದಕ್ಷಿಣ ಅಮೆರಿಕದ ಗಯಾನಾದಲ್ಲಿ ಅನಾರೋಗ್ಯದಿಂದ ಪತಿಯನ್ನು ಕಳೆದುಕೊಂಡ ಪತ್ನಿಯ ನೆರವಿಗೆ ಕರ್ನಾಟಕ ಸರ್ಕಾರ ಧಾವಿಸಿದೆ. ಮೃತನ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ರೂ. 3.6 ಲಕ್ಷ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ನೀಡುತ್ತಿದೆ.

ಮೃತಪಟ್ಟ ಪಿ.ಬಿ.ಗಿರೀಶ್ ಕೊಡಗಿನ ಮದೆನಾಡು ಗ್ರಾಮದ ನಿವಾಸಿ. ಅವರು ದಕ್ಷಿಣ ಅಮೆರಿಕದ ಗಯಾನಾದಲ್ಲಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಜುಲೈ 3 ರಿಂದ ವೈದ್ಯಕೀಯ ನೆರವು ಪಡೆಯುತ್ತಿದ್ದರು. ಜುಲೈ 14 ರಂದು ಗಯಾನಾದ ಆಸ್ಪತ್ರೆಯೊಂದರಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟರು ಎನ್ನಲಾಗಿದೆ.

ಆದರೆ, ಗಿರೀಶ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸುಮಾರು ರೂ. 12 ಲಕ್ಷ ವೆಚ್ಚವಾಗುತ್ತದೆ ಎಂಬುದು ಕುಟುಂಬಕ್ಕೆ ತಿಳಿದಿದೆ. ಇದರ ಬೆನ್ನಲ್ಲೇ ಗಿರೀಶ್ ಪತ್ನಿ ಜಾನಕಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಮೃತದೇಹವನ್ನು ಭಾರತಕ್ಕೆ ತರಲು ರಾಜ್ಯ ಸರ್ಕಾರದಿಂದ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಮೃತನ ಸಂಬಂಧಿಕರು ವಿರಾಜಪೇಟೆ ಶಾಸಕ ಎಎಸ್ ಪೊನ್ನಣ್ಣ ಅವರ ಬಳಿಯೂ ಸಹಾಯ ಕೋರಿ ಮನವಿ ಮಾಡಿದ್ದರು.

ಇದಾದ ನಂತರ ರಾಜ್ಯ ಶಿಷ್ಟಾಚಾರ, ವಿದೇಶಿ ಸೆಲ್ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು, ಗಿರೀಶ್ ಅವರ ಪಾರ್ಥಿವ ಶರೀರವನ್ನು ಅವರ ತಾಯ್ನಾಡಿಗೆ ತರಲು ರೂ. 3.6 ಲಕ್ಷ ನೀಡುವಂತೆ ನವದೆಹಲಿಯ ಕರ್ನಾಟಕ ಭವನದ ಆಯುಕ್ತರಿಗೆ ಆದೇಶಿಸಿದ್ದಾರೆ. ಉಳಿದ ಮೊತ್ತವನ್ನು ಗಿರೀಶ್ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸಿದ ಗಯಾನಾದ ಶೆರಿಫ್ ಜನರಲ್ ಆಸ್ಪತ್ರೆ ಭರಿಸಲಿದೆ.

ಮೃತದೇಹವನ್ನು ಶೀಘ್ರದಲ್ಲಿಯೇ ಭಾರತಕ್ಕೆ ತರಲು ಗಯಾನಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕ್ರಮ ಕೈಗೊಳ್ಳುವುದಾಗಿ ಹೇಳಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್