ಕೃಷ್ಣ ಭೈರೇಗೌಡ  
ರಾಜ್ಯ

ರಾಜ್ಯದಲ್ಲಿ 11.8 ಲಕ್ಷ ನಕಲಿ ಸಾಮಾಜಿಕ ಭದ್ರತಾ ಪಿಂಚಣಿ ಫಲಾನುಭವಿಗಳ ಪತ್ತೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಇಂದು ಕಾರವಾರದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆಧಾರ್ ಪರಿಶೀಲನೆಯು ಕನಿಷ್ಠ ವಯಸ್ಸಿನ ಮಾನದಂಡಗಳನ್ನು ಪೂರೈಸದಿದ್ದರೂ ಸಾವಿರಾರು ಜನರು ವೃದ್ಧಾಪ್ಯ ಪಿಂಚಣಿ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ ಎಂದು ಹೇಳಿದರು.

ಕಾರವಾರ: ರಾಜ್ಯಾದ್ಯಂತ ಸಾಮಾಜಿಕ ಭದ್ರತಾ ಪಿಂಚಣಿಯ 11.8 ಲಕ್ಷಕ್ಕೂ ಹೆಚ್ಚು ನಕಲಿ ಫಲಾನುಭವಿಗಳನ್ನು ಗುರುತಿಸಲಾಗಿದೆ. ಇದರಲ್ಲಿ ಪ್ರಾಥಮಿಕ ಸಂಶೋಧನೆಗಳ ಪ್ರಕಾರ 13,702 ಆದಾಯ ತೆರಿಗೆ ಪಾವತಿದಾರರು, 117 ಸರ್ಕಾರಿ ನೌಕರರು ಸೇರಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಇಂದು ಕಾರವಾರದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆಧಾರ್ ಪರಿಶೀಲನೆಯು ಕನಿಷ್ಠ ವಯಸ್ಸಿನ ಮಾನದಂಡಗಳನ್ನು ಪೂರೈಸದಿದ್ದರೂ ಸಾವಿರಾರು ಜನರು ವೃದ್ಧಾಪ್ಯ ಪಿಂಚಣಿ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ ಎಂದು ಹೇಳಿದರು.

ಇದಲ್ಲದೆ, ನಕಲಿ ಪ್ರಮಾಣಪತ್ರಗಳನ್ನು ಬಳಸಿಕೊಂಡು ಅಂಗವೈಕಲ್ಯ ಪಿಂಚಣಿ ಪಡೆಯುತ್ತಿರುವ ದೂರುಗಳು ಬಂದಿವೆ, ಇದರ ಮರು ಪರಿಶೀಲನೆಗೆ ಆದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ನಿರ್ಣಾಯಕ ಕ್ರಮ ಕೈಗೊಂಡು ಇಂತಹ ನ್ಯೂನತೆಗಳನ್ನು ಸರಿಪಡಿಸಲು ರಾಜ್ಯ ಸರ್ಕಾರದ ಮಟ್ಟದಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷ್ಣ ಭೈರೇಗೌಡ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿಯೇ, 351 ಆದಾಯ ತೆರಿಗೆ ಪಾವತಿದಾರರು ಸೇರಿದಂತೆ 11,956 ಅನುಮಾನಾಸ್ಪದ ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

ರಾಜ್ಯವು ಹಳೆಯ ಭೂ ದಾಖಲೆಗಳನ್ನು ನವೀಕರಿಸುವ ಅಭಿಯಾನವನ್ನು ಪ್ರಾರಂಭಿಸಿದೆ. 52.55 ಲಕ್ಷಕ್ಕೂ ಹೆಚ್ಚು ಭೂ ಹಿಡುವಳಿಗಳು ಇನ್ನೂ ಮೃತ ರೈತರ ಹೆಸರಿನಲ್ಲಿಯೇ ಇದ್ದು, ಅವರನ್ನು PM-Kisan ನಂತಹ ಕೇಂದ್ರ ಯೋಜನೆಗಳಿಗೆ ಅನರ್ಹರನ್ನಾಗಿ ಮಾಡಲಾಗಿದೆ. ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ಮಾಲೀಕತ್ವವನ್ನು ವರ್ಗಾಯಿಸಲು ಅಧಿಕಾರಿಗಳು ಮನೆ-ಮನೆಗೆ ಅಭಿಯಾನಗಳನ್ನು ಪ್ರಾರಂಭಿಸಿದ್ದಾರೆ ಎಂದರು.

ಕಳೆದ ಒಂದು ತಿಂಗಳಲ್ಲಿ ಮಾತ್ರ, 20,000 ಭೂ ಹಕ್ಕು ವರ್ಗಾವಣೆಗಳು ಪೂರ್ಣಗೊಂಡಿವೆ. ಉತ್ತರ ಕನ್ನಡದಲ್ಲಿ, 1.90 ಲಕ್ಷ ಭೂ ಪಾಲುಗಳು 57,000 ಮೃತ ರೈತರ ಹೆಸರಿನಲ್ಲಿ ಉಳಿದಿವೆ. ಆರು ತಿಂಗಳೊಳಗೆ ಈ ಹಕ್ಕುಗಳನ್ನು ಉಚಿತವಾಗಿ ವರ್ಗಾಯಿಸಲು ಕಂದಾಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ದಾಖಲೆ ತಿರುಚುವಿಕೆಯನ್ನು ತಡೆಗಟ್ಟಲು ಸರ್ಕಾರವು ಭೂ ಸುರಕ್ಷಾ ಯೋಜನೆಯಡಿಯಲ್ಲಿ ಡಿಜಿಟಲೀಕರಣವನ್ನು ತ್ವರಿತಗೊಳಿಸುತ್ತಿದೆ. ಭೂ-ಸುರಕ್ಷಾ ಯೋಜನೆಯನ್ನು 2024 ರಲ್ಲಿ ಕಂದಾಯ ಇಲಾಖೆಯು ರಾಜ್ಯಾದ್ಯಂತ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಮತ್ತು ಸುರಕ್ಷಿತಗೊಳಿಸುವ ಗುರಿಯೊಂದಿಗೆ ಪ್ರಾರಂಭಿಸಿತು. 100 ಕೋಟಿ ಪುಟಗಳ ಭೂ ದಾಖಲೆಗಳಲ್ಲಿ 33.1 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ, ಉಳಿದ ದಾಖಲೆಗಳನ್ನು ಪೂರ್ಣಗೊಳಿಸಲು ಆರು ತಿಂಗಳ ಗಡುವು ನೀಡಲಾಗಿದೆ.

ನಾಗರಿಕರು ಡಿಜಿಟಲೀಕರಿಸಿದ ಭೂ ದಾಖಲೆಗಳನ್ನು ಆನ್‌ಲೈನ್‌ ಮೂಲಕ ಮಾಡಬಹುದಾಗಿದೆ. ಇದರಿಂದಾಗಿ ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿರುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT