ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ 
ರಾಜ್ಯ

ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಮರು ಸಮೀಕ್ಷೆ; ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಜಾತಿ ಗಣತಿ ಮರು ಸಮೀಕ್ಷೆ ನಡೆಸಲಿದ್ದು, ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಹೊಸದಾಗಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ)ಯನ್ನು ಮತ್ತೊಮ್ಮೆ ನಡೆಸಲು ನಿರ್ಧರಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಒಪ್ಪಿಗೆ ಸೂಚಿಸಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ಅಂದರೆ 15 ದಿನಗಳ ಕಾಲ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಜಾತಿ ಗಣತಿ ಮರು ಸಮೀಕ್ಷೆ ನಡೆಸಲಿದ್ದು, ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

"ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಅದರಂತೆ, ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆಯನ್ನು ನಡೆಸಲಾಗುವುದು. ಜಾತಿ ತಾರತಮ್ಯವನ್ನು ಹೋಗಲಾಡಿಸುವುದು ಜನಗಣತಿಯ ಮುಖ್ಯ ಉದ್ದೇಶವಾಗಿದೆ" ಎಂದು ಸಭೆಯ ನಂತರ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಆರ್ಥಿಕ ಸ್ಥಿತಿ ಮತ್ತು ಭೂ ಮಾಲೀಕತ್ವದ ಬಗ್ಗೆ ಸಮಗ್ರ ಡೇಟಾವನ್ನು ಸಂಗ್ರಹಿಸುವುದು ಸಮೀಕ್ಷೆಯ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

"ಈ ಬಾರಿ ನಡೆಸುವ ಸಮೀಕ್ಷೆಯು ದೇಶದಲ್ಲಿ ಮಾದರಿ ಸಮೀಕ್ಷೆಯಾಗಬೇಕು". "ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಕ್ಟೋಬರ್ ಅಂತ್ಯದೊಳಗೆ ಸಮೀಕ್ಷೆಯ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಇಂದಿನಿಂದಲೇ ಪ್ರಾರಂಭಿಸಲು ಸೂಚನೆಗ ನೀಡಲಾಗಿದೆ" ಎಂದು ಅವರು ತಿಳಿಸಿದ್ದಾರೆ.

ಇಂದು ನಡೆದ ಸಭೆಯಲ್ಲಿ, ಸಮೀಕ್ಷೆಯ ಬಗ್ಗೆ ಯಾವುದೇ ದೂರುಗಳು ಬರದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಮತ್ತು ಯಾರೂ ಈ ಕಾರ್ಯದಿಂದ ಹೊರಗುಳಿಯದಂತೆ ನೋಡಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

"ಕಾಂತರಾಜು ಆಯೋಗವು ಈ ಹಿಂದೆ 54 ಪ್ರಶ್ನೆಗಳನ್ನು ಸಿದ್ಧಪಡಿಸುವ ಮೂಲಕ ಸಮೀಕ್ಷೆಯನ್ನು ಕೈಯಾರೆ ನಡೆಸಿತ್ತು. ಈ ಬಾರಿ, ಸಮೀಕ್ಷೆಯಲ್ಲಿ ಹೆಚ್ಚಿನ ಅಂಶಗಳನ್ನು ಸೇರಿಸಲಾಗುವುದು ಮತ್ತು ಮೊಬೈಲ್ ಅಪ್ಲಿಕೇಶನ್ ಬಳಸಿ ಸಮೀಕ್ಷೆಯನ್ನು ನಡೆಸಲಾಗುವುದು" ಎಂದು ಅವರು ತಿಳಿಸಿದ್ದಾರೆ.

ನೆರೆಯ ತೆಲಂಗಾಣದಲ್ಲಿ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯನ್ನು ಅಧ್ಯಯನ ಮಾಡಲು ಸೂಚನೆಗಳನ್ನು ನೀಡಲಾಗಿದೆ ಮತ್ತು ಸಮೀಕ್ಷೆಯ ಕಾರ್ಯವನ್ನು ಮೇಲ್ವಿಚಾರಣೆ ಮಾಡಲು ಉನ್ನತ ಮಟ್ಟದ ಸಮಿತಿ ರಚಿಸಲು ಸಹ ನಿರ್ಧರಿಸಲಾಗಿದೆ.

ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ಸಹಾಯದಿಂದ ವೈಜ್ಞಾನಿಕ ಮತ್ತು ಪಾರದರ್ಶಕ ವಿಧಾನದ ಅಗತ್ಯವನ್ನು ಸಿಎಂ ಒತ್ತಿ ಹೇಳಿದ್ದಾರೆ.

ಸಮೀಕ್ಷೆಯ ಕಾರ್ಯಕ್ಕೆ 1.65 ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲದ ಅಗತ್ಯವಿದೆ ಎಂದ ಸಿಎಂ ಸಿದ್ದರಾಮಯ್ಯ, ಶಿಕ್ಷಕರ ಜೊತೆಗೆ, ಇತರ ಇಲಾಖೆಗಳ ಸಿಬ್ಬಂದಿಯನ್ನು ಸಹ ಹೊಸ ಸಮೀಕ್ಷೆಗೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಮತ್ತು ಶಾಸಕ ಪೊನ್ನಣ್ಣ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

SCROLL FOR NEXT