ಕಾರವಾರ ಅರ್ಬನ್ ಬ್ಯಾಂಕ್ 
ರಾಜ್ಯ

ದಿವಾಳಿ: ಕಾರವಾರ ಅರ್ಬನ್ ಬ್ಯಾಂಕ್ ಪರವಾನಗಿ ರದ್ದುಪಡಿಸಿದ RBI!

ಬ್ಯಾಂಕ್ ಅನ್ನು ಬಂದ್ ಮಾಡಲು ಮತ್ತು ಬ್ಯಾಂಕ್‌ಗೆ ಲಿಕ್ವಿಡೇಟರ್ (ಒಂದು ಕಂಪನಿಯ ದಿವಾಳಿತನ ಅಥವಾ ಮುಚ್ಚುವಿಕೆ ಪ್ರಕ್ರಿಯೆಯಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆ) ನೇಮಿಸಲು ಆದೇಶ ನೀಡುವಂತೆ ಕರ್ನಾಟಕ ಸಹಕಾರ ಸಂಘಗಳ ರಿಜಿಸ್ಟ್ರಾರ್‌ಗೆ ಕೋರಲಾಗಿದೆ.

ಕಾರವಾರ: ದಿವಾಳಿಯಾಗಿರುವ ಕಾರವಾರ ಅರ್ಬನ್ ಸಹಕಾರ ಬ್ಯಾಂಕ್ ನ ಪರವಾನಗಿಯನ್ನು ರದ್ದುಗೊಳಿಸಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಹೇಳಿದೆ. ಪರಿಣಾಮ ಇಂದಿನಿಂದ ಜಾರಿಗೆ ಬರುವಂತೆ ಬ್ಯಾಂಕಿಂಗ್ ವ್ಯವಹಾರವನ್ನು ಮುಕ್ತಾಯಗೊಳಿಸಲಾಗಿದೆ.

ಬ್ಯಾಂಕ್ ಅನ್ನು ಬಂದ್ ಮಾಡಲು ಮತ್ತು ಬ್ಯಾಂಕ್‌ಗೆ ಲಿಕ್ವಿಡೇಟರ್ (ಒಂದು ಕಂಪನಿಯ ದಿವಾಳಿತನ ಅಥವಾ ಮುಚ್ಚುವಿಕೆ ಪ್ರಕ್ರಿಯೆಯಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆ) ನೇಮಿಸಲು ಆದೇಶ ನೀಡುವಂತೆ ಕರ್ನಾಟಕ ಸಹಕಾರ ಸಂಘಗಳ ರಿಜಿಸ್ಟ್ರಾರ್‌ಗೆ ಕೋರಲಾಗಿದೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

ದಿವಾಳಿಯಾದ ಮೇಲೆ ಪ್ರತಿಯೊಬ್ಬ ಠೇವಣಿದಾರರು, ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್‌ನಿಂದ ರೂ. 5 ಲಕ್ಷದವರೆಗೆ ಠೇವಣಿ ವಿಮೆ ಹಣ ಪಡೆಯಲು ಅರ್ಹರಾಗಿರುತ್ತಾರೆ.

ಬ್ಯಾಂಕ್ ಸಲ್ಲಿಸಿದ ಮಾಹಿತಿಯ ಪ್ರಕಾರ ಶೇ.92. 9 ರಷ್ಟು ಠೇವಣಿದಾರರು DICGC ನಿಂದ ತಮ್ಮ ಸಂಪೂರ್ಣ ಠೇವಣಿ ಹಣ ಪಡೆಯಲು ಅರ್ಹರಾಗಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ.

ಜೂನ್ 30, 2025 ರಂತೆ, DICGC ಈಗಾಗಲೇ ಒಟ್ಟು ವಿಮೆ ಠೇವಣಿಗಳಲ್ಲಿ ರೂ. 37.79 ಕೋಟಿ ಪಾವತಿಸಿರುವ ವಿವರ ನೀಡಿರುವ ಆರ್ ಬಿಐ, ಈ ಸಹಕಾರ ಬ್ಯಾಂಕ್ ಸಾಕಷ್ಟು ಬಂಡವಾಳ, ಗಳಿಕೆಯ ನಿರೀಕ್ಷೆಯೂ ಹೊಂದಿಲ್ಲ. ಅದರ ಪ್ರಸ್ತುತ ಹಣಕಾಸಿನ ಸ್ಥಿತಿಯೊಂದಿಗೆ ಬ್ಯಾಂಕ್ ತನ್ನ ಪ್ರಸ್ತುತ ಠೇವಣಿದಾರರಿಗೆ ಸಂಪೂರ್ಣ ಹಣ ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು RBI ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

1st Test: ಇತಿಹಾಸ ಬರೆದ Jasprit Bumrah, ಕನ್ನಡಿಗ Javagal Srinath ಹಳೇ ದಾಖಲೆ ಕೊನೆಗೂ ಪತನ!

1st Test: Siraj, Bumrah ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ West Indies, ಮೊದಲ ಇನ್ನಿಂಗ್ಸ್ 162 ರನ್ ಗೆ ಆಲೌಟ್!

ಸ್ವದೇಶಿ-ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

SCROLL FOR NEXT