ಕೆಜಿಎಫ್ ಬಾಬು ಒಡೆತನದ ಐಷಾರಾಮಿ ಕಾರುಗಳು 
ರಾಜ್ಯ

KGF ಬಾಬುಗೆ ಆರ್‌ಟಿಓ ಶಾಕ್‌: ಬಿಗ್‌ ಬಿ, ಆಮೀರ್‌ ಖಾನ್‌ರಿಂದ ಖರೀದಿಸಿದ್ದ ಐಷಾರಾಮಿ ಕಾರು ಜಪ್ತಿ!

ಕೆಜಿಎಫ್ ಬಾಬುಗೆ ಸೆಲೆಬ್ರಿಟಿಗಳು ಬಳಕೆ ಮಾಡಿದ ಕಾರುಗಳನ್ನು ಖರೀದಿ ಮಾಡುವ ಕ್ರೇಜ್ ಇದೆ. ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳ ಕಾರು ಎಂದರೆ ಅವರು ಖರೀದಿಸಿ ತರುತ್ತಾರೆ.

ಬೆಂಗಳೂರು: ಕೆಜಿಎಫ್ ಬಾಬು ನಿವಾಸದ ಮೇಲೆ ಆರ್ ಟಿಒ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. kgf ಬಾಬು ಅವರ ಬಳಿಯಿದ್ದ ಐಷಾರಾಮಿ ಕಾರುಗಳನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ವಸಂತ ನಗರದಲ್ಲಿರುವ ಕೆಜಿ ಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಆರ್ ಟಿಓ ಅಧಿಕಾರಿಗಳು ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕೆಜಿಎಫ್ ಬಾಬುಗೆ ಸೆಲೆಬ್ರಿಟಿಗಳು ಬಳಕೆ ಮಾಡಿದ ಕಾರುಗಳನ್ನು ಖರೀದಿ ಮಾಡುವ ಕ್ರೇಜ್ ಇದೆ. ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳ ಕಾರು ಎಂದರೆ ಅವರು ಖರೀದಿಸಿ ತರುತ್ತಾರೆ. ಕೆಜಿಎಫ್ ಬಾಬು ಬಳಿ ಎರಡು ರೋಲ್ಸ್ ರಾಯ್ಸ್ ಕಾರಿದೆ. ಅಮಿತಾಭ್ ಬಚ್ಚನ್ ಬಳಸುತ್ತಿದ್ದ MH 11 AX 1 ಹಾಗೂ ಆಮಿರ್ ಖಾನ್ ಒಂದು ವರ್ಷ ಮಾತ್ರ ಬಳಸಿದ್ದ MH 02 BB 2 ಸಂಖ್ಯೆಯ ಕಾರನ್ನು ಕೆಜಿಎಫ್ ಬಾಬು ಖರೀದಿಸಿ ತಂದಿದ್ದರು.

ಈಗ ಬಾಬು ತೆರಿಗೆ ಕಟ್ಟದ ಕಾರಣ ಆರ್​ಟಿಒ ಜಂಟಿ ಆಯುಕ್ತೆ ಶೋಭಾ ನೇತೃತ್ವದ ತಂಡ ಬಾಬು ಮನೆಯ ಮೇಲೆ ದಾಳಿ ನಡೆಸಿತು. ಈ ವೇಳೆ ಗೇಟ್​ ತೆಗೆಯದೆ ಕೆಜಿಎಫ್ ಬಾಬು ಮೊಂಡಾಟ ಪ್ರದರ್ಶಿಸಿದರು.

ನಾನು ಟ್ಯಾಕ್ಸ್ ಕಟ್ಟಲು ಸಿದ್ಧನಿದ್ದೇನೆ. ನನ್ನ ಎರಡು ಕಾರುಗಳಿಗೆ ಮಹಾರಾಷ್ಟ್ರದಲ್ಲಿ ನೋಂದಣಿ ಆಗಿದೆ. 2 ಕಾರುಗಳಿಗೆ ಮಹಾರಾಷ್ಟ್ರದಲ್ಲಿ ಲೈಫ್​ಟೈಮ್ ಟ್ಯಾಕ್ಸ್ ಕಟ್ಟಿದ್ದೇನೆ. ಈಗ RTO ಅಧಿಕಾರಿಗಳು ಕರ್ನಾಟಕ ತೆರಿಗೆ ಕಟ್ಟಿ ಎನ್ನುತ್ತಿದ್ದಾರೆ. ಒಬ್ಬ ಜವಾಬ್ದಾರಿಯುತ ವ್ಯಕ್ತಿಯಾಗಿ ಟ್ಯಾಕ್ಸ್ ಕಟ್ಟದೇ ಇರಲ್ಲ. ಆರ್​ಟಿಒ ಈಗ ಅವಕಾಶ ಕೊಟ್ಟರೆ ಈಗಲೇ ತೆರಿಗೆ ಕಟ್ಟುತ್ತೇನೆ’ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ, 'Hormuz' ರಕ್ಷಣೆಗೆ NATO ನೆರವು ಕೋರಿದ ಟ್ರಂಪ್

ಹಾರ್ಮುಜ್ ನಿಂದ ದೇಶಕ್ಕೆ ತೈಲ ಹಡಗುಗಳ ಸುಗಮ ಸಂಚಾರ: ಇರಾನ್ ನ ಭಾರತ ಒಪ್ಪಿಸಿದ್ದು ಹೇಗೆ?: ಜೈಶಂಕರ್ ಬಿಚ್ಚಿಟ್ಟ ಮಾಹಿತಿ ಇದು...

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಗಡುವು ಮೀರಿ 5 ತಿಂಗಳಾದರೂ ಮುಕ್ತಾಯಗೊಳ್ಳದ ಯಶವಂತಪುರ, ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನವೀಕರಣ ಕಾಮಗಾರಿ!

ರಾಜ್ಯಸಭೆಗೆ 26 ಮಂದಿ ಅವಿರೋಧ ಆಯ್ಕೆ: 3ರಾಜ್ಯಗಳಲ್ಲಿ ಬಿಗ್ ಫೈಟ್; ಮೇಲ್ಮನೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ!

SCROLL FOR NEXT