ಸಾಂದರ್ಭಿಕ ಚಿತ್ರ 
ರಾಜ್ಯ

ಸೈಬರ್ ವಂಚನೆ: ಚೆನ್ನೈ ಪೊಲೀಸರಿಂದ ಬೆಳಗಾವಿಯಲ್ಲಿ ಮೂವರ ಬಂಧನ

ಚೆನ್ನೈ ಪೊಲೀಸ್ ತಂಡ ಇಂದು ಬೆಳಗಾವಿಗೆ ಆಗಮಿಸಿ ಅನಿಲ್ ಕೊಲ್ಲಾಪುರ, ರೋಹನ್ ಕಾಂಬ್ಳೆ ಮತ್ತು ಸರ್ವೇಶ್ ಕಿವಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿದೆ.

ಬೆಳಗಾವಿ: ಸೈಬರ್ ಅಪರಾಧ ಪ್ರಕರಣವೊಂದರಲ್ಲಿ, ಸೈಬರ್ ವಂಚನೆ ಮಾಡಲು ನಕಲಿ ಕಂಪನಿ ಮತ್ತು ಬ್ಯಾಂಕ್ ಖಾತೆಯನ್ನು ಸೃಷ್ಟಿಸಿದ ಆರೋಪದ ಮೇಲೆ ಬೆಳಗಾವಿ ನಗರದ ಮೂವರು ನಿವಾಸಿಗಳನ್ನು ಗುರುವಾರ ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಪೊಲೀಸ್ ಇಲಾಖೆಯ ಸೂಚನೆಯ ಮೇರೆಗೆ, ಚೆನ್ನೈ ಪೊಲೀಸ್ ತಂಡ ಇಂದು ಬೆಳಗಾವಿಗೆ ಆಗಮಿಸಿ ಅನಿಲ್ ಕೊಲ್ಲಾಪುರ, ರೋಹನ್ ಕಾಂಬ್ಳೆ ಮತ್ತು ಸರ್ವೇಶ್ ಕಿವಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿದೆ.

ಬಂಧಿತ ಆರೋಪಿಗಳನ್ನು ಬೆಳಗಾವಿಯ ಮೂರನೇ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಹೆಚ್ಚಿನ ತನಿಖೆಗಾಗಿ ಚೆನ್ನೈಗೆ ಕರೆದೊಯ್ಯಲಾಗಿದೆ ಎಂದು ಬೆಳಗಾವಿ ಸೈಬರ್ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ನಕಲಿ ಕಂಪನಿಯ ದಾಖಲೆಗಳನ್ನು ಬಳಸಿಕೊಂಡು ಬ್ಯಾಂಕ್ ಖಾತೆ ತೆರೆದು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಲ್ಲಿಯವರೆಗೆ, ಈ ಖಾತೆಗಳಲ್ಲಿ 27 ವಂಚನೆ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಆರೋಪಿಗಳು ಬೆಂಗಳೂರು ಮತ್ತು ತುಮಕೂರಿನಲ್ಲಿಯೂ ಇದೇ ರೀತಿಯ ವಂಚನೆ ಎಸಗಿದ್ದಾರೆ. ಅಲ್ಲದೆ ಪೊಲೀಸ್ ಇಲಾಖೆಯನ್ನು ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆನ್ ಲೈನ್ ಮೂಲಕ ಸ್ವೀಕರಿಸಿದ ಸೈಬರ್ ಲಿಂಕ್‌ಗಳೊಂದಿಗೆ ವ್ಯವಹರಿಸುವಾಗ ಸಾರ್ವಜನಿಕರು ಅತ್ಯಂತ ಜಾಗರೂಕರಾಗಿರಬೇಕು. ಅಂತಹ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡುವುದು ಮತ್ತು ವೈಯಕ್ತಿಕ ದಾಖಲೆಗಳನ್ನು ಸಲ್ಲಿಸುವುದರಿಂದ ವ್ಯಕ್ತಿಗಳು ಆರ್ಥಿಕ ವಂಚನೆಗೆ ಗುರಿಯಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?