ನಿರ್ಮಾಣ ಹಂತದ ಕಟ್ಟಡ 
ರಾಜ್ಯ

ರಾಜ್ಯದಲ್ಲಿ ಹೊಸದಾಗಿ ನಿರ್ಮಿಸುವ ಬಹುಮಹಡಿ ಕಟ್ಟಡಗಳಿಗೆ ಶೇ.1 ರಷ್ಟು ಸೆಸ್ ವಿಧಿಸಲು ಸಚಿವ ಸಂಪುಟ ಅಸ್ತು

ವಾಣಿಜ್ಯ ಕಟ್ಟಡಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು ಹಾಗೂ ಅಪಾರ್ಟ್ಮೆಂಟ್​​ಗಳು ಸೇರಿದಂತೆ ರಾಜ್ಯದ ಎಲ್ಲ ಬಹುಮಹಡಿ, ಎತ್ತರದ ಕಟ್ಟಡಗಳಿಗೆ ಶೇ. 1ರಷ್ಟು ರ ಸೆಸ್ ವಿಧಿಸುವ ತೀರ್ಮಾನವನ್ನೂ ಕೈಗೊಳ್ಳಲಾಗಿದೆ ಎಂದರು.

ಬೆಂಗಳೂರು: ರಾಜ್ಯದ ಜನರಿಗೆ ಸಿದ್ದರಾಮಯ್ಯ ಸರ್ಕಾರ ಗುರುವಾರ ಮತ್ತೊಂದು ಶಾಕ್ ನೀಡಿದ್ದು, ರಾಜ್ಯಾದ್ಯಂತ ಹೊಸದಾಗಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡಗಳಿಗೆ ಶೇ. 1 ರಷ್ಟು ಫೈರ್ ಸೆಸ್ ವಿಧಿಸಲು ನಿರ್ಧರಿಸಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ರಾಜ್ಯದಲ್ಲಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1ರಷ್ಟು ಫೈರ್ ಸೆಸ್ ವಿಧಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.

ವಾಣಿಜ್ಯ ಕಟ್ಟಡಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು ಹಾಗೂ ಅಪಾರ್ಟ್ಮೆಂಟ್​​ಗಳು ಸೇರಿದಂತೆ ರಾಜ್ಯದ ಎಲ್ಲ ಬಹುಮಹಡಿ, ಎತ್ತರದ ಕಟ್ಟಡಗಳಿಗೆ ಶೇ. 1ರಷ್ಟು ರ ಸೆಸ್ ವಿಧಿಸುವ ತೀರ್ಮಾನವನ್ನೂ ಕೈಗೊಳ್ಳಲಾಗಿದೆ ಎಂದರು.

ಈ ಸಂಬಂಧ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ The Karnataka Fire Force Act, 1964ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕರ್ನಾಟಕ ಅಗ್ನಿಶಾಮಕ (ತಿದ್ದುಪಡಿ) ವಿಧೇಯಕ 2025 ಮಂಡಿಸಲು ತೀರ್ಮಾನಿಸಿದೆ ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿಗಳು 2024-25ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದಲ್ಲಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1ರ ದರದಲ್ಲಿ Fire Cess ವಿಧಿಸಲಾಗುವುದು ಎಂದು ಘೋಷಿಸಿದ್ದರು. ಅದರಂತೆ ಇದೀಗ ತಿದ್ದುಪಡಿ ಮಾಡಲು ತೀರ್ಮಾನಿಸಲಾಗಿದ್ದು, ಹೊಸ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆ ಮೇಲೆ ಶೇ. 1 ರಷ್ಟು ಅಗ್ನಿಶಾಮಕ ಸೆಸ್ ಹಾಕಲು ತೀರ್ಮಾನಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT