ಕೆಜಿಎಫ್ ಬಾಬು  
ರಾಜ್ಯ

RTO ದಾಳಿ: 2 ರೋಲ್ಸ್ ರಾಯ್ಸ್ ಕಾರುಗಳಿಗೆ 40 ಲಕ್ಷ ರೂ ತೆರಿಗೆ ಪಾವತಿಸಿದ KGF ಬಾಬು

ಕೆಜಿಎಫ್ ಬಾಬು ನಟ ಅಮಿತಾಬ್ ಬಚ್ಚನ್ ಮತ್ತು ಅಮೀರ್ ಖಾನ್ ಅವರಿಂದ ಖರೀದಿಸಿದ ರೋಲ್ಸ್ ರಾಯ್ಸ್ ಫ್ಯಾಂಟಮ್ ಮತ್ತು ರೋಲ್ಸ್ ರಾಯ್ಸ್ ಘೋಸ್ಟ್ ಕಾರುಗಳನ್ನು ಹೊಂದಿದ್ದಾರೆ .

ಬೆಂಗಳೂರು: ಮಹಾರಾಷ್ಟ್ರದಲ್ಲಿ ನೋಂದಾಯಿಸಲಾದ ಎರಡು ಐಷಾರಾಮಿ ಕಾರುಗಳನ್ನು ಕರ್ನಾಟಕದಲ್ಲಿ ಓಡಿಸುತ್ತಿದ್ದ ಉದ್ಯಮಿ ಮತ್ತು ರಾಜಕಾರಣಿ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಂದ ಸಾರಿಗೆ ಅಧಿಕಾರಿಗಳು ಸುಮಾರು 40 ಲಕ್ಷ ರೂ. ಬಾಕಿ ಇದ್ದ ರಸ್ತೆ ತೆರಿಗೆ ಸಂಗ್ರಹಿಸಿದ್ದಾರೆ.

ಕೆಜಿಎಫ್ ಬಾಬು ನಟ ಅಮಿತಾಬ್ ಬಚ್ಚನ್ ಮತ್ತು ಅಮೀರ್ ಖಾನ್ ಅವರಿಂದ ಖರೀದಿಸಿದ ರೋಲ್ಸ್ ರಾಯ್ಸ್ ಫ್ಯಾಂಟಮ್ ಮತ್ತು ರೋಲ್ಸ್ ರಾಯ್ಸ್ ಘೋಸ್ಟ್ ಕಾರುಗಳನ್ನು ಹೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಂಟಿ ಸಾರಿಗೆ ಆಯುಕ್ತೆ ಶೋಭಾ ನೇತೃತ್ವದ ತಂಡವು ಬುಧವಾರ ವಸಂತ ನಗರದಲ್ಲಿರುವ ಬಾಬು ಅವರ ಮನೆಗೆ ಹೋಗಿ, ಎರಡು ಕಾರುಗಳಿಗೆ ತಡವಾಗಿ ತೆರಿಗೆ ಪಾವತಿ ಮಾಡಿದ್ದಕ್ಕಾಗಿ ದಂಡ ಸೇರಿದಂತೆ ಸುಮಾರು 40 ಲಕ್ಷ ರೂ. ಪಾವತಿಸಬೇಕಾಗುತ್ತದೆ ಎಂದು ಹೇಳಿದರು.

ಕರ್ನಾಟಕದ ಹೊರಗೆ ನೋಂದಾಯಿಸಲಾದ ಯಾವುದೇ ವಾಹನಕ್ಕೆ, ಒಂದು ವರ್ಷಕ್ಕೂ ಹೆಚ್ಚು ಕಾಲ ವಾಹನವನ್ನು ನಿರ್ವಹಿಸುತ್ತಿರುವುದು ಕಂಡುಬಂದರೆ ಮಾಲೀಕರು ಇಲ್ಲಿ ರಸ್ತೆ ತೆರಿಗೆಯನ್ನು ಪಾವತಿಸಬೇಕು. ಬಾಬು ಸುಮಾರು ಎರಡು ವರ್ಷಗಳಿಂದ ವಾಹನಗಳನ್ನು ಬಳಸುತ್ತಿದ್ದಾರೆ. ಆರ್‌ಟಿಒ ಅಧಿಕಾರಿಗಳು ಬಾಬು ವಿರುದ್ಧ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಿದ್ದಾರೆ"ಎಂದು ಶೋಭಾ ಹೇಳಿದರು.

ಬಾಬು ಆರಂಭದಲ್ಲಿ ಕರ್ನಾಟಕದಲ್ಲಿ ವಾಹನಗಳನ್ನು ಶಾಶ್ವತವಾಗಿ ಬಳಸುತ್ತಿಲ್ಲ ಎಂದು ಹೇಳಿಕೊಂಡಿದ್ದರು ಹಾಗೂ ಅವುಗಳನ್ನು ಮಹಾರಾಷ್ಟ್ರಕ್ಕೆ ಹಿಂತಿರುಗಿಸಲಾಗುವುದು ಎಂದು ತಿಳಿಸಿದ್ದರು. ಆದರೆ ಅವುಗಳನ್ನು ಹಿಂತಿರುಗಿಸಿರಲಿಲ್ಲ. ಒಂದು ಕಾರಿನ ಮೇಲೆ ₹19.73 ಲಕ್ಷ ತೆರಿಗೆ ಬಾಕಿ ಇತ್ತು, ಇನ್ನೊಂದು ಕಾರಿನ ಮೇಲೆ ₹18.53 ಲಕ್ಷ ತೆರಿಗೆ ಬಾಕಿ ಇತ್ತು. ಎರಡೂ ವಾಹನಗಳ ವಿಳಂಬ ಪಾವತಿಗೆ ಅವರು ಒಂದೇ ಬಾರಿಗೆ ತೆರಿಗೆ ಮತ್ತು ದಂಡ ಪಾವತಿಸಿದ್ದಾರೆ ಎಂದು ಆರ್ ಟಿ ಒ ಅಧಿಕಾರಿ ಶೋಭಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT