ಯಾಸೀನ್ ಭಟ್ಕಳ್ online desk
ರಾಜ್ಯ

2008ರ ಉಳ್ಳಾಲ ಭಯೋತ್ಪಾದನಾ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ಯಾಸಿನ್ ಭಟ್ಕಳ್ ನ್ಯಾಯಾಲಯಕ್ಕೆ ಹಾಜರು

ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿತ್ತು. ಆದರೆ ಯಾಸಿನ್ ಭಟ್ಕಳ್ ಸೇರಿದಂತೆ ಇತರ ಆರು ಮಂದಿ ಆ ಸಮಯದಲ್ಲಿ ತಲೆಮರೆಸಿಕೊಂಡಿದ್ದರು.

ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಭಯೋತ್ಪಾದಕ ಯಾಸಿನ್ ಭಟ್ಕಳ್‌ನನ್ನು ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 2008 ರ ಭಯೋತ್ಪಾದನಾ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆತ ನ್ಯಾಯಾಲಯಕ್ಕೆ ಹಾಜರಾಗಿದ್ದ.

ಅಕ್ಟೋಬರ್ 4, 2008 ರಂದು, ಜಿಲ್ಲಾ ಅಪರಾಧ ಗುಪ್ತಚರ ಬ್ಯೂರೋ (ಡಿಸಿಐಬಿ) ಯ ಮಾಹಿತಿಯ ಆಧಾರದ ಮೇಲೆ, ಉಳ್ಳಾಲ ಪೊಲೀಸರು, ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿ ಮತ್ತು ಚೆಂಬುಗುಡ್ಡೆ ಪ್ರದೇಶಗಳಿಂದ ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಏಳು ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದರು. ಬಂಧಿತರು ಭಾರತದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ ಆರೋಪ ಎದುರಿಸುತ್ತಿದ್ದು, ಅವರ ಬಳಿ ಸ್ಫೋಟಕಗಳು ಮತ್ತು ಬಾಂಬ್ ತಯಾರಿಸುವ ಸಾಮಗ್ರಿಗಳು ಇರುವುದು ಕಂಡುಬಂದಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿತ್ತು. ಆದರೆ ಯಾಸಿನ್ ಭಟ್ಕಳ್ ಸೇರಿದಂತೆ ಇತರ ಆರು ಮಂದಿ ಆ ಸಮಯದಲ್ಲಿ ತಲೆಮರೆಸಿಕೊಂಡಿದ್ದರು.

2017ರ ತೀರ್ಪಿನಲ್ಲಿ, ಜೆಎಂಎಫ್‌ಸಿ ನ್ಯಾಯಾಲಯ ಮೂವರು ಆರೋಪಿಗಳಾದ ಸೈಯದ್ ಮೊಹಮ್ಮದ್ ನೌಶಾದ್, ಅಹ್ಮದ್ ಬಾವಾ ಅಬೂಬಕ್ಕರ್ (33), ಮತ್ತು ಫಕೀರ್ ಅಹ್ಮದ್ ಅಲಿಯಾಸ್ ಫಕೀರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇತರ ನಾಲ್ವರು - ಮೊಹಮ್ಮದ್ ಅಲಿ, ಜಾವೇದ್ ಅಲಿ, ಮೊಹಮ್ಮದ್ ರಫೀಕ್ ಮತ್ತು ಶಬ್ಬೀರ್ ಭಟ್ಕಳ್ 2017 ರ ಏಪ್ರಿಲ್ 12 ರಂದು ಪ್ರಕರಣದಿಂದ ಖುಲಾಸೆಗೊಂಡಿದ್ದರು.

ಆ ಸಮಯದಲ್ಲಿ ಯಾಸಿನ್ ಭಟ್ಕಳ್ ತಲೆಮರೆಸಿಕೊಂಡಿದ್ದರಿಂದ, ಅವರ ವಿರುದ್ಧದ ಆರೋಪಗಳನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗಲಿಲ್ಲ. ನಂತರ, ಅವರನ್ನು ಅಪರಾಧಿ ಎಂದು ಘೋಷಿಸಲಾಯಿತು ಮತ್ತು ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಉಳ್ಳಾಲ ಪ್ರಕರಣದಲ್ಲಿ ಯಾಸಿನ್ ಭಟ್ಕಳ್ ನ್ನು ಈ ಹಿಂದೆ ಎಂದಿಗೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಅವರ ಅನುಪಸ್ಥಿತಿಯಿಂದಾಗಿ, ಅವರ ವಿರುದ್ಧದ ವಿಚಾರಣೆ ವರ್ಷಗಳ ಕಾಲ ಬಾಕಿ ಇತ್ತು.

ಉಳ್ಳಾಲ ಪೊಲೀಸರು ಮತ್ತು ತಿಹಾರ್ ಜೈಲು ಅಧಿಕಾರಿಗಳ ನಡುವಿನ ಸಮನ್ವಯದ ನಂತರ, ಗುರುವಾರ ಯಾಸಿನ್ ಭಟ್ಕಳ್ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಮುಂದಿನ ವಿಚಾರಣೆಯನ್ನು ಆಗಸ್ಟ್ 20 ಕ್ಕೆ ನಿಗದಿಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೈಸೂರು: ಪಂಚಭೂತಗಳಲ್ಲಿ ಸಾಹಿತಿ ಎಸ್‌.ಎಲ್‌ ಭೈರಪ್ಪ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ `ಅಕ್ಷರ ಮಾಂತ್ರಿಕ' ನ ಅಂತ್ಯಕ್ರಿಯೆ

MiG-21 ಇನ್ನು ನೆನಪು ಮಾತ್ರ: ಚಂಡೀಗಢದಲ್ಲಿ ಇಂದು ಭಾರತೀಯ ವಾಯುಪಡೆಯಿಂದ ವಿದಾಯ

ಕೇಂದ್ರದ ಆರೋಪಗಳ ನಡುವೆ Sonam Wangchuk ಬೆಂಬಲಕ್ಕೆ ನಿಂತ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ

ಲಡಾಕ್ ಲಡಾಯಿ: ಅ. 7 ರ ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆ

ಉತ್ತರ ಪ್ರದೇಶ: ಎನ್ಕೌಂಟರ್ ನಂತರ ಶಿಕ್ಷಕಿ ಮುಖಕ್ಕೆ ಆಸಿಡ್ ಎರಚಿದ ವ್ಯಕ್ತಿಯ ಬಂಧನ

SCROLL FOR NEXT