ಹೈಕೋರ್ಟ್  
ರಾಜ್ಯ

'ಇಸ್ಲಾಂಗೆ ಮತಾಂತರ' ಆರೋಪ: ಮೂವರ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್

ಬಲವಂತ ಅಥವಾ ಆಮಿಷಗಳಿಲ್ಲದೆ ಶಾಂತಿಯುತ ಧರ್ಮೋಪದೇಶಕ್ಕೆ ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಅವಕಾಶ ನೀಡಲಾಗಿದೆ.

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿರುವ ಹಿಂದೂ ದೇವಾಲಯದ ಬಳಿ "ಇಸ್ಲಾಂ ಧರ್ಮ ಬೋಧಿಸಿದ" ಮತ್ತು ಧಾರ್ಮಿಕ ಕರಪತ್ರಗಳನ್ನು ವಿತರಿಸುವ ಮತಾಂತರಕ್ಕೆ ಪ್ರಚೋದಿಸಿದ ಆರೋಪ ಹೊತ್ತಿದ್ದ ಮೂವರು ಮುಸ್ಲಿಮರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಉದ್ಯೋಗದ ಭರವಸೆ ನೀಡುವ ಮೂಲಕ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಮತಾಂತರಕ್ಕೆ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ಜಮಖಂಡಿ ನಿವಾಸಿಗಳಾದ ಮುಸ್ತಾಫ ಬಿನ್ ಮುರ್ತುಜ್ ಸಾಬ್, ಅಲಿಸಾಬ್ ಬಿನ್ ಶಬ್ಬೀರ್ ಅಳಗುಂಡಿ ಮತ್ತು ಸುಲೇಮಾನ್ ಬಿನ್ ರಿಯಾಜ್ ಅಹಮದ್ ಗಲಗಲಿ ಅವರು ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಬಲವಂತ, ವಂಚನೆ ಅಥವಾ ಪ್ರಚೋದನೆಗೆ ಸಂಬಂಧಿಸಿದಂತೆ ಯಾವುದೇ ಸೂಕ್ತ ಪುರಾವೆಗಳಿಲ್ಲ ಎಂದು ಹೇಳಿ, ಈ ಮೂವರ ವಿರುದ್ಧದ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.

ಬಲವಂತ ಅಥವಾ ಆಮಿಷಗಳಿಲ್ಲದೆ ಶಾಂತಿಯುತ ಧರ್ಮೋಪದೇಶಕ್ಕೆ ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಅವಕಾಶ ನೀಡಲಾಗಿದೆ. ಇದು ಒಬ್ಬರ ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಖಾತರಿಪಡಿಸುತ್ತದೆ ಎಂದು ಹೈಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

IPL 2026: ನಿರಾಶೆಯಾಗಿದೆ.. ಆದ್ರೆ ಮತ್ತೆ ಸೂರ್ಯೋದಯವಾಗುತ್ತದೆ: RCB ಬಳಿಕ ಭಾವುಕ ಶ್ರೇಯಸ್ ಅಯ್ಯರ್ ಹೇಳಿಕೆ!

IPL 2026: 'It’s okay ಮತ್ತೆ ಈ ರೀತಿ ಮಾಡ್ಬೇಡ': 49 ಎಂದು ಗೇಲಿ ಮಾಡಿದ್ದ ಪಂಜಾಬ್ ಗೆ ಬಟ್ಟೆ ಸುತ್ತಿ ಹೊಡೆದ RCB

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ; ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

SCROLL FOR NEXT