ರಾಘವೇಂದ್ರ ಹಿಟ್ನಾಳ್ ಮತ್ತು ಭೀಮಾ ನಾಯ್ಕ್ 
ರಾಜ್ಯ

ಭೀಮಾ ನಾಯ್ಕ್ ಗೆ ಮುಖಭಂಗ: 'ರಾಬಕೊವಿ'ಗೆ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ್ ಆಯ್ಕೆ

ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದರು.

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದರು.

ಇವರಿಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ, ಬಳ್ಳಾರಿ ಉಪವಿಭಾಗಾಧಿಕಾರಿ ಪ್ರಮೋದ್ ಘೋಷಿಸಿದರು‌. ಕೆಎಂಎಫ್‌ನ ಮಾಜಿ ಅಧ್ಯಕ್ಷ ಭೀಮ ನಾಯ್ಕ ಚುನಾವಣೆಯಿಂದ ದೂರ ಉಳಿದರು. ಒಕ್ಕೂಟದ ಒಟ್ಟು 12 ನಿರ್ದೇಶಕ ಸ್ಥಾನಗಳಲ್ಲಿ ಹಿಟ್ನಾಳ್ 7 ಮತ್ತು ಭೀಮ ನಾಯ್ಕ 5 ನಿರ್ದೇಶಕರ ಬಲ ಹೊಂದಿದ್ದರು. ಇದರ ಜತೆಗೆ ಸರ್ಕಾರ ಹಿಟ್ನಾಳ್ ಅವರನ್ನು ಒಕ್ಕೂಟಕ್ಕೆ ಎರಡು ದಿನಗಳ ಹಿಂದಷ್ಟೇ ನಾಮನಿರ್ದೇಶನ ಮಾಡಿತ್ತು. ಹೀಗಾಗಿ ಹಿಟ್ನಾಳ್‌ ಸಂಖ್ಯಾ ಬಲ 8ಕ್ಕೆ ಏರಿತ್ತು.

ಶಾಸಕ ಹಿಟ್ನಾಳ ಆರಂಭಿಕ ಹೆಜ್ಜೆಯಾಗಿ ರಾಬಕೊವಿ ಒಕ್ಕೂಟದ ಅಧ್ಯಕ್ಷರಾಗಿ ಮುಂದೆ ಕೆಎಂಎಫ್‌ ಗಾದಿಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದಕ್ಕೆ ಬೇಕಾದ ವೇದಿಕೆಯನ್ನು ಸಿದ್ಧಪಡಿಸಿಕೊಳ್ಳುವ ಭಾಗವಾಗಿಯೇ ರಾಜ್ಯದ ವಿವಿಧ ಹಾಲು ಒಕ್ಕೂಟಗಳಲ್ಲಿರುವ ಆಪ್ತರನ್ನು ಕೆಎಂಎಫ್‌ಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT